Webdunia - Bharat's app for daily news and videos

Install App

ಯುವ ಜನೋತ್ಸವದ ಸ್ಪರ್ಧೆಗಳ ವಿಜೇತರ ಬಹುಮಾನ ಹೆಚ್ಚಿಸಿ ಸರಕಾರದ ಆದೇಶ

Webdunia
ಗುರುವಾರ, 3 ಫೆಬ್ರವರಿ 2022 (21:19 IST)
ಬೆಂಗಳೂರು:-ರಾಜ್ಯ ಮಟ್ಟದ ಯುವ ಜನೋತ್ಸವದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸ್ಪರ್ಧಿಗಳ ಬಹುಮಾನ ಹೆಚ್ಚಿಸಿ ಸರಕಾರದ ಆದೇಶ ಹೊರಡಿಸಲಾಗಿದೆ.
ಯುವಜನೋತ್ಸವದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸ್ಪರ್ಧಿಗಳ ಬಹುಮಾನ ಮೊತ್ತವನ್ನು ಹೆಚ್ಚಿಸುವುದಾಗಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಅವರು ಘೋಷಿಸಿದ್ದರು. ವೈಯಕ್ತಿಕ ಸ್ಪರ್ಧೆಗಳಿಗೆ ಮೊದಲ ಬಹುಮಾನ ₹ 15 ಸಾವಿರ, ಎರಡನೇ ಬಹುಮಾನ ₹ 10 ಸಾವಿರ, ಮೂರನೇ ಬಹುಮಾನ ₹ 5 ಸಾವಿರ, ಗುಂಪುಗಳಿಗೆ ನೀಡುವ ಮೊದಲ ಬಹುಮಾನ ₹ 25 ಸಾವಿರ, ಎರಡನೇ ಬಹುಮಾನ ₹ 15 ಸಾವಿರಕ್ಕೆ ಹೆಚ್ಚಿಸಿ ಘೋಷಣೆ ಮಾಡಿದ್ದರು.
ಸಚಿವ ಡಾ.ನಾರಾಯಣಗೌಡ ಅವರ ಆದೇಶದ ಮೇರೆಗೆ ರಾಜ್ಯ ಮಟ್ಟದ ಯುವ ಜನೋತ್ಸವ ಕಾರ್ಯಕ್ರಮದಲ್ಲಿ ವೈಯಕ್ತಿಕ ಮತ್ತು ಗುಂಪು ಸ್ಪರ್ಧೆಗಳ ವಿಜೇತರಿಗೆ ನೀಡಲಾಗುವ ಬಹುಮಾನದ ಮೊತ್ತವನ್ನು ಪರಿಷ್ಕರಿಸಿ ಸರಕಾರದ ಆದೇಶ ಹೊರಡಿಸಲಾಗಿದೆ.
 
ಹೆಚ್ಚಿನ ಪ್ರೋತ್ಸಾಹ ನೀಡಲು ಬಹುಮಾನದ ಮೊತ್ತ ಹೆಚ್ಚಳ:
ರಾಜ್ಯ ಮಟ್ಟದ ಯುವ ಜನೋತ್ಸವದ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ವಿಜೇತರಾಗುವವರ ಬಹುಮಾನ ಮೊತ್ತ ಕಡಿಮೆ ಇತ್ತು. ಹಾಗಾಗಿ ಆದಿಚುಂಚನಗಿರಿಯಲ್ಲಿ ನಡೆದ ರಾಜ್ಯ ಮಟ್ಟದ ಯುವ ಜನೋತ್ಸವ ಕಾರ್ಯಕ್ರಮದ ಸಂದರ್ಭದಲ್ಲಿ ಬಹುಮಾನ ಮೊತ್ತ ಹೆಚ್ಚಿಸಿ, ಘೋಷಣೆ ಮಾಡಿದ್ದೆ. ಅದರಂತೆ ಇದೀಗ ಅಧಿಕೃತ ಆದೇಶ ಹೊರಡಿಸಲಾಗಿದೆ. ಇದರಿಂದ ಹಲವು ಪ್ರತಿಭಾವಂತರಿಗೆ ಹೆಚ್ಚಿನ ಪ್ರೋತ್ಸಾಹ ಸಿಗಲಿದೆ. ಜೊತೆಗೆ ಯುವ ಜನೋತ್ಸವದ ಕಾರ್ಯಕ್ರಮಗಳಲ್ಲಿ ಉತ್ಸಾಹದಿಂದ ಪಾಲ್ಗೊಳ್ಳುತ್ತಾರೆ ಎಂದು ಸಚಿವ ಡಾ.ನಾರಾಯಣಗೌಡ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments