Webdunia - Bharat's app for daily news and videos

Install App

Vidhana soudha: ವಿಧಾನಸೌಧಕ್ಕೆ ಸಾರ್ವಜನಿಕರೂ ಪ್ರವೇಶಕ್ಕೆ ಅನುಮತಿ ಕೊಟ್ಟು ಟ್ವಿಸ್ಟ್ ಇಟ್ಟ ಸರ್ಕಾರ

Krishnaveni K
ಸೋಮವಾರ, 26 ಮೇ 2025 (10:48 IST)
ಬೆಂಗಳೂರು: ಇನ್ನು ಮುಂದೆ ವೀಕೆಂಡ್ ಗಳಲ್ಲಿ ಸಾರ್ವಜನಿಕರಿಗೂ ವಿಧಾನಸೌಧಕ್ಕೆ ಪ್ರವೇಶ ನೀಡಲಾಗುವುದು ಎಂದು ಸಚಿವ ಎಚ್ ಕೆ ಪಾಟೀಲ್ ಘೋಷಣೆ ಮಾಡಿದ್ದರು. ಆದರೆ ಅದರ ಜೊತೆಗೆ ಸರ್ಕಾರ ಮತ್ತೊಂದು ಟ್ವಿಸ್ಟ್ ಕೊಟ್ಟಿದೆ.

ಇಷ್ಟು ದಿನ ವಿಧಾನಸೌಧದ ಮುಂಭಾಗದ ರಸ್ತೆಯಲ್ಲಿ ನಿಂತು ಫೋಟೋ ಹೊಡೆಸಿಕೊಳ್ಳುವುದಷ್ಟೇ ಸಾರ್ವಜನಿಕರಿಗಿದ್ದ ಅವಕಾಶವಾಗಿತ್ತು. ಆದರೆ ಈಗ ವಿಧಾನಸೌಧಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ.

ಜೂನ್ 1 ರಿಂದ ಪ್ರತೀ ತಿಂಗಳ ಎಲ್ಲಾ ಭಾನುವಾರ ಬೆಳಿಗ್ಗೆ 8 ರಿಂದ ಸಂಜೆ 5 ರವರೆಗೆ ಮತ್ತು ಎರಡನೇ ಮತ್ತು ನಾಲ್ಕನೇ ಶನಿವಾರಗಳಂದು ಸಾರ್ವಜನಿಕರ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ. ಆದರೆ ವಿಧಾನಸೌಧವನ್ನು ಇನ್ನಷ್ಟು ಹತ್ತಿರದಿಂದ ನೋಡಬಹುದು ಎಂದು ಖುಷಿಯಲ್ಲಿದ್ದ ಜನರಿಗೆ ಸರ್ಕಾರ ಮತ್ತೊಂದು ಶಾಕ್ ಕೊಟ್ಟಿದೆ.

ವಿಧಾನಸೌಧದ ಒಳಗೆ ಪ್ರವೇಶಿಸಲು ಆನ್ ಲೈನ್ ಮೂಲಕ ಬುಕಿಂಗ್ ಮಾಡಿ ಶುಲ್ಕ ಪಾವತಿಸಬೇಕಾಗುತ್ತದೆ. ಕೆಸ್ ಟಿಡಿಸಿ ವೆಬ್ ಸೈಟ್ ನಲ್ಲಿ ನೀಡಲಾಗುವ ಸ್ಲಾಟ್ ಗಳ ಆಧಾರದಲ್ಲಿ ಬುಕಿಂಗ್ ಮಾಡಿ ಶುಲ್ಕ ಪಾವತಿಸಿದರೆ ಒಳಗೆ ಪ್ರವೇಶಿಸಲು ಅನುಮತಿ ಸಿಗುತ್ತದೆ. 16 ವರ್ಷದೊಳಗಿನವರಿಗೆ ಉಚಿತ ಪ್ರವೇಶವಿದೆ. ಆದರೆ 16 ವರ್ಷಕ್ಕಿಂತ ಮೇಲ್ಪಟ್ಟವರಿಗೆ ತಲಾ 50 ರೂ. ಶುಲ್ಕ ವಿಧಿಸಲಾಗುತ್ತದೆ.

ಇದಕ್ಕೆ ಬಿಜೆಪಿ ಭಾರೀ ಟೀಕೆ ನಡೆಸಿದೆ. ವಿಧಾನಸೌಧವಿಟ್ಟುಕೊಂಡೂ ರಾಜ್ಯ ಸರ್ಕಾರ ಹಣ ವಸೂಲಿಗೆ ಮುಂದಾಗಿದೆ. ಅಂದರೆ ಈ ಸರ್ಕಾರ ಎಂಥಾ ಲಜ್ಜೆಗೆಟ್ಟ ಸರ್ಕಾರವಿರಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments