Webdunia - Bharat's app for daily news and videos

Install App

ಸರ್ಕಾರದ ‌ಪಾಪದ ಕೊಡ ತುಂಬಿದ್ದು, ಶೀಘ್ರದಲ್ಲೇ ಸಿಎಂ ರಾಜೀನಾಮೆ: ವಿಜಯೇಂದ್ರ ಭವಿಷ್ಯ

Sampriya
ಭಾನುವಾರ, 10 ನವೆಂಬರ್ 2024 (13:39 IST)
ಬಳ್ಳಾರಿ: ಕಾಂಗ್ರೆಸ್ ಸರ್ಕಾರದ ‌ಪಾಪದ ಕೊಡ ತುಂಬಿದ್ದು, ಶೀಘ್ರದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ವಿಧಾನಸಭಾ ಚುನಾವಣೆಯಲ್ಲಿ 136 ಸ್ಥಾನಗಳು ಗೆದ್ದಾಗ ಸಿಎಂ ನಿರಾಳವಾಗಿದ್ದರು. ಆದರೆ, ಕಳೆದ ಒಂದೂವರೆ ವರ್ಷದಲ್ಲಿ ಕಾಂಗ್ರೆಸ್ ಹಗರಣಗಳನ್ನು ಬಿಜೆಪಿ ಒಂದೊಂದು ಬಯಲಿಗೆ ಎಳೆಯುತ್ತಿದ್ದಂತೆ ಸಿದ್ದರಾಮಯ್ಯ ಆತಂಕದಲ್ಲಿ ಇದ್ದಾರೆ ಎಂದು ಜಿಂದಾಲ್ ವಿದ್ಯಾನಗರದಲ್ಲಿ ಭಾನುವಾರ ತಿಳಿಸಿದರು.

ರಾಜ್ಯದಲ್ಲಿ ಅಸಮರ್ಥ ಸಿಎಂಯೊಬ್ಬರು ಆಡಳಿತ‌ ನಡೆಸುತ್ತಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಭ್ರಷ್ಟಾಚಾರ ಮುಕ್ತ ಮಾಡುತ್ತವೆ ಎಂದು ಅಧಿಕಾರದ ಚುಕ್ಕಾಣಿ ಹಿಡಿಯಿತು. ಆದರೆ, ಸಾಲು ಸಾಲು ಹಗರಣಗಳಿಂದ ಒಂದೂವರೆ ವರ್ಷದಲ್ಲಿಯೇ ಸರ್ಕಾರ ಜನಪ್ರಿಯತೆ ಕಳೆದುಕೊಂಡಿದೆ ಎಂದು ಟೀಕಿಸಿದರು.

ಹದಿನೈದು ಬಜೆಟ್ ಮಂಡಿಸಿದ ಸಿದ್ದರಾಮಯ್ಯ ಮುಡಾ ಪ್ರಕರಣದಲ್ಲಿ ಎ1 ಆರೋಪಿಯಾಗಿ ಅಪರಾಧಿ ಸ್ಥಾನದಲ್ಲಿ‌ ನಿಂತಿದ್ದಾರೆ. ಮುಡಾ ಕಮಿಷನರ್ ದಿನೇಶ್ ಎಂಬ ಅಧಿಕಾರಿಯನ್ನು ಸ್ವತಃ ಸಿಎಂ ಬಚ್ಚಿಟ್ಟಿದ್ದಾರೆ ಎಂದು ದೂರಿದರು.

ಕೋವಿಡ್ ಅಕ್ರಮದ ಬಗ್ಗೆ ನ್ಯಾ. ಮೈಕಲ್ ಕುನ್ಹಾ ಮಧ್ಯಂತರ 14 ಪುಟದ ವರದಿಯಲ್ಲಿ ಹದಿನಾಲ್ಕು ಕೋಟಿ ರೂ. ಹಗರಣ ನಡೆದಿದೆ ಎಂದು ಕಾಂಗ್ರೆಸ್ ಆರೋಪ ಮಾಡಿದೆ. ಈ ವರದಿಯಿಂದ ಮಾಜಿ ಸಿಎಂ ಯಡಿಯೂರಪ್ಪ, ಮಾಜಿ ಶ್ರೀರಾಮುಲು ಅವರನ್ನು ಬೆದರಿಸಲು ಹೊರಟಿದ್ದಾರೆ. ಆದರೆ, ಯಡಿಯೂರಪ್ಪ ಅವರ ತಾಕತ್ತು ಕಾಂಗ್ರೆಸ್ ‌ನಾಯಕರಿಗಿಂತ ಸಿದ್ದರಾಮಯ್ಯ ಅವರಿಗೆ ಹೆಚ್ಚು ಗೊತ್ತು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments