ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದಲ್ಲಿ ಸರ್ಕಾರದ ಕೈವಾಡ: ಪ್ರಹ್ಲಾದ್ ಜೋಶಿ ಗರಂ

Sampriya
ಶನಿವಾರ, 13 ಸೆಪ್ಟಂಬರ್ 2025 (16:17 IST)
ಹುಬ್ಬಳ್ಳಿ: ಧರ್ಮಸ್ಥಳ ವಿರುದ್ಧದ ಷಡ್ಯಂತ್ರದ ಹಿಂದೆ ಸಾಕ್ಷಿ ದೂರುದಾರ ಐದು ಮಂದಿ ಹೆಸರು ಹೇಳಿದ್ರ ಅವರನ್ನು ಬಂಧಿಸಲಿಲ್ಲ. ಇದರ ಹಿಂದೆ ರಾಜ್ಯ ಕಾಂಗ್ರೆಸ್ ಸರ್ಕಾರದ ಷಡ್ಯಂತ್ರವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಗಂಭೀರ ಆರೋಪ ಮಾಡಿದ್ದಾರೆ. 

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಡಾ.ಡಿ ವೀರೇಂದ್ರ ಹೆಗ್ಗಡೆ ಹಾಗೂ ಧರ್ಮಸ್ಥಳ ಕ್ಷೇತ್ರದ ಬಗ್ಗೆ ತೇಜೋವಧೆ ಮಾಡಲಾಯಿತು. ಇನ್ನೂ ಬುರುಡೆ ಪ್ರಕರಣ ಸಂಬಂಧ ಮುಸುಕುಧಾರಿ ಈಗಾಗಲೇ ಹೇಳಿಕೆಯನ್ನು ನೀಡಿದ್ದಾನೆ. ಹೀಗಿದ್ದಾಗಲೂ ಅವರನ್ನು ಬಂಧಿಸದೆ, ವ್ಯವಸ್ಥಿತವಾಗಿ ಪ್ರಕರಣ ಮುಚ್ಚಿಹಾಕಲು ಸರ್ಕಾರ ಯತ್ನಿಸುತ್ತಿದೆ ಎಂದರು.                                                                                                                 

ಮೃತ ವ್ಯಕ್ತಿಯ ಹೂತ ಶವ ಹೊರ ತೆಗೆಯಬೇಕೆಂದರೆ ಕೋರ್ಟ್‌ ಅನುಮತಿ ಬೇಕಾಗುತ್ತದೆ. ಆದರೆ, ಧರ್ಮಸ್ಥಳದಲ್ಲಿ ಅದ್ಯಾವುದನ್ನೂ ಪಾಲಿಸದೆ ಬೇಕಾಬಿಟ್ಟಿಯಾಗಿ ಹತ್ತಕ್ಕೂ ಹೆಚ್ಚು ಕಡೆ ಅಗೆದು ಶೋಧ ನಡೆಸಿದರು. ಎಲ್ಲೂ ಶವದ ಕುರುಹು ಸಿಗಲಿಲ್ಲ. ಸಾಕ್ಷಿ ದೂರುದಾರ ಕೆಲವು ಮಾಹಿತಿಯನ್ನು ಪೊಲೀಸರಿಗೆ ತಿಳಿಸಿದ್ದಾನೆ. ಈ ಎಲ್ಲ ಬೆಳವಣಿಗೆಯಲ್ಲಿ ಹೊರ ರಾಜ್ಯದವರ ಕೈವಾಡವಿದ್ದು, ಸರ್ಕಾರ ಅದರ ಭಾಗವಾಗಿದೆ’ ಎಂದು ಹೇಳಿದರು.

ಧರ್ಮಸ್ಥಳ ಕ್ಷೇತ್ರದ ಹೆಸರು ಕೆಡಿಸಲು ಹೊರ ದೇಶಗಳಿಂದ ಭಯೋತ್ಪಾದಕರ ನಿಧಿ ಬಳಕೆಯಾಗುತ್ತಿರಬಹುದು. ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಬೇಕು ಎಂದು ಈ ಹಿಂದೆಯೇ ಒತ್ತಾಯಿಸಿದ್ದೆ. ಅದರ ಜೊತೆಗೆ ನ್ಯಾಯಾಲಯದ ಅಡಿಯಲ್ಲಿಯೂ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರೈವೆಸಿಗೆ ಅಡ್ಡಿಯಾಗುತ್ತಾಳೆಂದು ಮಗಳನ್ನು ಮುಗಿಸಿದ ಮಲತಂದೆ ಕೊನೆಗೂ ಅರೆಸ್ಟ್‌

ಹಂಪಿಯಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಪತ್ತೆ, ಎಲ್ಲಿ ಗೊತ್ತಾ

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮಹದೇವಪ್ಪರನ್ನು ಭೇಟಿಯಾಗಿ ನವೆಂಬರ್ ಕ್ರಾಂತಿ ಬಗ್ಗೆ ಪರಮೇಶ್ವರ್ ಸ್ಫೋಟಕ ಹೇಳಿಕೆ

Rain Alert, ದೇಶದ ಈ ಭಾಗಕ್ಕೆ ಚಂಡಮಾರುತ ಅಪ್ಪಳಿಸುವ ಮುನ್ಸೂಚನೆ

ಮುಂದಿನ ಸುದ್ದಿ
Show comments