Webdunia - Bharat's app for daily news and videos

Install App

ಸರ್ಕಾರಿ ಶಾಲಾ ಮುಖ್ಯ ಶಿಕ್ಷಕರಿಗೆ ಮೂಗುದಾರ: ಶಿಕ್ಷಣ ಇಲಾಖೆಯ ಖಡಕ್‌ ಆದೇಶದಲ್ಲಿ ಅಂತದ್ದೇನಿದೆ

Sampriya
ಗುರುವಾರ, 20 ಫೆಬ್ರವರಿ 2025 (14:31 IST)
Photo Courtesy X
ಬೆಂಗಳೂರು: ಸರ್ಕಾರಿ ಶಾಲೆಗಳ ಮುಖ್ಯ ಶಿಕ್ಷಕರಿಗೆ ಶಿಕ್ಷಣ ಇಲಾಖೆ ಮುಗುದಾರ ಹಾಕಿದೆ.  ಯಾರಿಗೂ ಮಾಹಿತಿ ನೀಡದೇ ತಮ್ಮ ವೈಯಕ್ತಿಕ ಕೆಲಸ, ಸಭೆ-ಸಮಾರಂಭಗಳಿಗೆ ಹೋಗುತ್ತಿರುವವರಿಗೆ ಇಲಾಖೆ ಬಿಸಿ ಮುಟ್ಟಿಸಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಈ ಸಂಬಂಧಆದೇಶ ಹೊರಡಿಸಿದ್ದು, ಶಾಲಾ ಸಮಯದಲ್ಲಿ ಇನ್ನು ಮುಂದೆ ಮುಖ್ಯ ಶಿಕ್ಷಕರು ಸಭೆ, ಸಮಾರಂಭಗಳಿಗೆ ಹೋಗುವಂತಿಲ್ಲ ಎಂದು ಖಡಕ್‌ ಎಚ್ಚರಿಕೆಯನ್ನು ರವಾನಿಸಿದೆ.

ಪ್ರಾಥಮಿಕ ಮತ್ತು ಪ್ರೌಢಶಾಲಾ ಮುಖ್ಯಶಿಕ್ಷಕರು ಶಾಲಾ ಸಮಯದಲ್ಲಿ ಉಪಸ್ಥಿತರಿಲ್ಲದೇ ಸಭೆ ಮತ್ತು ಸಮಾರಂಭಕ್ಕೆ ತೆರಳಿರುವುದಾಗಿ ತಿಳಿದುಬಂದಿದ್ದು, ವಿದ್ಯಾರ್ತಿಗಳ ಗುಣಾತ್ಮಕ ಶಿಕ್ಷಣ ನೀಡುವುದು ಸಾಧ್ಯವಾಗುತ್ತಿರುವುದಿಲ್ಲ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಈ ಪ್ರಯುಕ್ತ ಮುಖ್ಯ ಶಿಕ್ಷಕರು ಇನ್ನು ಮುಂದೆ ಸಭೆ/ ಸಮಾರಂಭಗಳಿಗೆ ತೆರಳುವ ಸಮಯದಲ್ಲಿ ಚಲನ ವಲನದ ಮಾಹಿತಿಯನ್ನು ನಮೂದಿಸಿ ಸಮಾರಂಭದ ಆಹ್ವಾನ ಪತ್ರಿಕೆ ಮತ್ತು ಸಭಾ ಸೂಚನಾ ಚಿತ್ರವನ್ನು ಲಗತ್ತಿಸುವಂತೆ ಎಲ್ಲ ಮುಖ್ಯಶಿಕ್ಷಕರಿಗೆ ಸೂಚಿಸಲಾಗಿದೆ. ಈ ಆದೇಶವನ್ನು ಆದೇಶ ಉಲ್ಲಂಘನೆ ಮಾಡಿದ್ದಲ್ಲಿ ಶಿಸ್ತು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ರವಾನಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments