Publish Date: Sat, 09 Sep 2017 (19:28 IST)
Updated Date: Sat, 09 Sep 2017 (19:29 IST)
ಹಿರಿಯ ಪತ್ರಕರ್ತೆ, ಚಿಂತಕಿ ಗೌರಿ ಲಂಕೇಶ್ ಹತ್ಯೆ ಖಂಡಿಸಿ ಪ್ರತಿರೋಧ ಸಮಾವೇಶ ನಡೆಸಲಾಗುವುದು ಎಂದು ಗೌರಿ ಲಂಕೇಶ್ ಹತ್ಯೆ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷೆ ನೀಲಾ.ಕೆ ಹೇಳಿದ್ದಾರೆ.
ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಪೂರ್ವ ಭಾವಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೆಪ್ಟೆಂಬರ್ 12 ರಂದು ಫ್ರೀಡಂಪಾರ್ಕ್ನಲ್ಲಿ ಪ್ರತಿರೋಧ ಸಮಾವೇಶ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಪತ್ರಕರ್ತೆ, ಚಿಂತಕಿ, ಗೌರಿ ಲಂಕೇಶ್ ಹತ್ಯೆ ವಿಶ್ವವೇ ತಲೆತಗ್ಗಿಸುವಂತಹದು. ಎಲ್ಲರು ಸೇರಿ ವಿಶ್ವಶಾಂತಿ ಜಾಗೃತಿಗಾಗಿ ಹೋರಾಟ ನಡೆಸುತ್ತೇವೆ ಸೆ,12 ರಂದು ಸೆಂಟ್ರಲ್ ಕಾಲೇಜಿನಿಂದ ಮೆರವಣಿಗೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯ ಸರಕಾರ ಕೂಡಲೇ ಗೌರಿ ಲಂಕೇಶ್ ಹಂತಕರನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಗೌರಿ ಲಂಕೇಶ್ ಹತ್ಯೆ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷೆ ನೀಲಾ.ಕೆ ಒತ್ತಾಯಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.