Webdunia - Bharat's app for daily news and videos

Install App

ನಾಗರಹೊಳೆ ಸಫಾರಿ ವಾಹನಗಳಿಗೆ ಜಿ.ಪಿ.ಎಸ್ ಅಳವಡಿಕೆ

Webdunia
ಸೋಮವಾರ, 3 ಜನವರಿ 2022 (19:49 IST)
ನಾಗರಹೊಳೆ‌: ವನ್ಯಜೀವ ಸಂಕುಲ ರಕ್ಷಿತಾರಣ್ಯ ವ್ಯಾಪ್ತಿಯಲ್ಲಿ ಈ ಹಿಂದೆಯೂ ಪ್ರವಾಸಿಗರಿಗೆ ಸಫಾರಿ ಮೂಲಕ ಅನನ್ಯ ವನ್ಯ ಸಂಕುಲಗಳ ವೀಕ್ಷಣೆಗೆ ಅವಕಾಶ ಇತ್ತಾದರೂ ವಾಹನಗಳ ಕೊರತೆ ಹಾಗೂ ವೈಜ್ಞಾನಿಕ ವ್ಯವಸ್ಥೆ ಇಲ್ಲದೆ ಇಲಾಖೆ ಸಿಬ್ಬಂದಿಗಳು ಹಾಗೂ ಪ್ರವಾಸಿಗರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಈಗ ಎಲ್ಲಾ ಸಮಸ್ಯೆಗಳಿಗೆ ತೆರೆ ಎಳೆಯುವ ದೃಷ್ಟಿಯಿಂದ ಅರಣ್ಯ ಇಲಾಖೆ ವಿನೂತನ ಪ್ರಯೋಗ ಒಂದಕ್ಕೆ ಮುನ್ನುಡಿ ಬರೆಯಲು ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಇದೇ  ಜನವರಿ ತಿಂಗಳಲ್ಲಿ ಈ ಪ್ರಯೋಗ ಜಾರಿಯಾಗಲಿದೆ.
ಸಫಾರಿ ವಾಹನಗಳಿಗೆ ಜಿ.ಪಿ.ಎಸ್ ಅಳವಡಿಸಲು ಇಲಾಖೆ ನಿರ್ಧರಿಸಿದ್ದು. ಹಿಂದಿನ ಸಮಸ್ಯೆಗಳಿಗೆ ಅಂತ್ಯಹಾಡಲು ಇಲಾಖೆ ಸಿಬ್ಬಂದಿಗಳು ಕಾರ್ಯಪ್ರವೃತ್ತರಾಗಿದ್ದಾರೆ.
ಈ‌ ಮೊದಲು ಅರಣ್ಯ ಇಲಾಖೆಯ ವಾಹನಗಳು ಮಾತ್ರ ಸಫಾರಿಗೆ ಬಳಕೆಯಾಗುತ್ತಿದ್ದು. ಇದೀಗ ಕೇರಳ ರಾಜ್ಯದ ವಯನಾಡು ವ್ಯಾಪ್ತಿಯ ಸಫಾರಿ ಕ್ಯಾಂಪಿನ ಮಾದರಿಯಲ್ಲಿ ಸ್ಥಳಿಯ ಖಾಸಗಿ ವಾಹನಗಳನ್ನೂ ಕೂಡ ಟೆಂಡರ್ ಮೂಲಕ ಗುರುತಿಸಿ ಸಫಾರಿಗೆ ಬಳಸಿಕೊಳ್ಳುವ ನಿರ್ಧಾರವನ್ನು ಅರಣ್ಯ ಇಲಾಖೆ ಹಾಗು ಸರಕಾರ ಮಾಡಿದೆ. ಪ್ರವಾಸಿಗರು ತಮ್ಮ ಖಾಸಗಿ ವಾಹನವನ್ನು ಸಫಾರಿಗೆ ಬಳಸಬಹುದಾಗಿದ್ದು. ವಿಶೇಷ ಅನುಮತಿ ಮೇರೆಗೆ ಜಿ.ಪಿ.ಎಸ್ ಅಳವಡಿಕೆ ಮಾಡಿಸಿಕೊಂಡು ಪ್ರವಾಸಿಗರ ವಾಹನಗಳಿಗೂ ಮುಂದಿನ ದಿನಗಳಲ್ಲಿ ಸಫಾರಿಗೆ ಅವಕಾಶ ಕಲ್ಪಿಸಲಾಗುತ್ತದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ‌ ನೀಡಿರುತ್ತಾರೆ.
ತಿತಿಮತಿ-ಪಿರಿಯಾಪಟ್ಟಣ ವ್ಯಾಪ್ತಿಯಲ್ಲಿ ಸಫಾರಿಗೆ ಚಿಂತನೆ; ದಕ್ಷಿಣ ಕೊಡಗಿನ ತಿತಿಮತಿ-ಪಿರಿಯಾಪಟ್ಟಣ ವ್ಯಾಪ್ತಿಯ ಸುಮಾರು 120ಕ್ಕೂ ಹೆಚ್ಚು. ಕಿ.ಲೋ ಮೀಟರ್ ವ್ಯಾಪ್ತಿಯ ರಕ್ಷಿತಾರಣ್ಯ ಪ್ರದೇಶದಲ್ಲಿ ಅನನ್ಯ ವನ್ಯಜೀವಿಸಂಕುಲವಿದ್ದು. ಮುಂದಿನ ದಿನಗಳಲ್ಲಿ ಆ ವ್ಯಾಪ್ತಿಯಲ್ಲಿಯೂ ಸಫಾರಿಗೆ ಅವಾಕಾಶ ಕಲ್ಪಿಸುವತ್ತ ಅರಣ್ಯ ಇಲಾಖೆ ಚಿಂತಿಸಿದೆ ಎಂದು ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿರುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಮುಂದಿನ ಸುದ್ದಿ
Show comments