Webdunia - Bharat's app for daily news and videos

Install App

ಪೊಲೀಸ್ ಠಾಣೆ ಮೆಟ್ಟಿಲೇರಿದ ಇಲಿ-ಹೆಗ್ಗಣ ಜಗಳ

Webdunia
ಸೋಮವಾರ, 6 ಫೆಬ್ರವರಿ 2017 (08:20 IST)
ಇತ್ತೀಚಿಗೆ ಸಾಮಾಜಿಕ ಜಾಲತಾಣಗಳ ಸದುಪಯೋಗಕ್ಕಿಂತ ದುರುಪಯೋಗವೇ ಹೆಚ್ಚಾಗುತ್ತಿದೆ. ಕೆಲ ಜನಪ್ರತಿನಿಧಿಗಳಿಗಂತೂ ಇವು ಆರೋಪ-ಪ್ರತ್ಯಾಪರೋಪಗಳನ್ನು ಮಾಡಿಕೊಳ್ಳಲಿರುವ ಮಾಧ್ಯಮಗಳಾಗಿ ಬದಲಾಗಿವೆ. ಅದಕ್ಕೊಂದು ಸ್ಪಷ್ಟ ನಿದರ್ಶನ ಮೈಸೂರಿನಲ್ಲಿ ನಡೆದಿರುವ ಈ ಪ್ರಕರಣ.
ಸಾಮಾಜಿಕ ಜಾಲತಾಣ ಫೇಸ್‌ಬುಕ್ ಜಗಳ ಪೊಲೀಸ್ ಠಾಣೆ ಮೆಟ್ಟಿಲೇರಿದ ಘಟನೆ ಮೈಸೂರು ಗ್ರಾಮೀಣ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
 
ಅಷ್ಟಕ್ಕೂ ನಡೆದಿದ್ದೇನು: ಶ್ರೀರಾಂಪುರ ಗ್ರಾಮಪಂಚಾಯತ್ ಉಪಾಧ್ಯಕ್ಷೆ ಉಷಾ ಎನ್ನುವವರು, "ಅಧ್ಯಕ್ಷರಿಗೆ ಕೆಲಸ ಮಾಡೋಕ್ಕಿಂತ ದುಡ್ಡ ಮಾಡೋದೆ ಕೆಲಸ. ಅವರ ಟಾರ್ಗೆಟ್ ಮುಟ್ಟಬೇಕಲ್ಲ, ಅದಕ್ಕೆ ಟಾರ್ಗೆಟ್ ಕಡೆ ಗಮನ", ಎಂದು ಫೇಸ್‌ಬುಕ್‌ನಲ್ಲಿ ಕಮೆಂಟ್ ಮಾಡಿದ್ದರು. ಇದನ್ನು ಕಂಡ ಪಂಚಾಯತ್ ಅಧ್ಯಕ್ಷೆ ಚೂಡಾಮಣಿ ಸುಮ್ಮನಾಗಲಿಲ್ಲ. 'ಬೇರೆಯವರ ತಟ್ಟೆಯಲ್ಲಿ ಇಲಿ ಹುಡುಕೋ ಬದಲು ನಿಮ್ಮ ತಟ್ಟೆಯಲ್ಲಿ ಬಿದ್ದಿರುವ ಹೆಗ್ಗಣವನ್ನು ನೋಡಿಕೊಳ್ಳಿ', ಎಂದು ನೇರಾನೇರವಾಗಿ ಉಷಾ ಅವರಿಗೆ ಟಾಂಗ್ ನೀಡಿದ ಅವರು, ಸುಳ್ಳು ಆರೋಪ ಮಾಡಿ ನನ್ನ ತೇಜೋವಧೆ ಮಾಡಿದ್ದಾರೆ, ಎಂದು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.  
 
ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಸಬ್ ಇನ್ಸಪೆಕ್ಟರ್ ಜಯಪ್ರಕಾಶ್ ತನಿಖೆಯನ್ನು ಆರಂಭಿಸಿದ್ದಾರೆ. 
 
ಈ ಕುರಿತು ಪ್ರತಿಕ್ರಿಯಿಸಿರುವ ಉಷಾ, ಈ ತಪ್ಪು ಆಗಬಾರದಿತ್ತು, ಆದರೆ ಆಗಿ ಹೋಗಿದೆ. ಈಗಾಗಲೇ ಕ್ಷಮೆಯಾಚಿಸಿದ್ದೇನೆ. ಮಾತುಕತೆ ಮೂಲಕ ವಿವಾದವನ್ನು ಬಗೆ ಹರಿಸಿಕೊಳ್ಳುವುದಾಗಿ ಹೇಳಿದ್ದಾರೆ.
 
ಜನಪ್ರತಿನಿಧಿಗಳ ಈ ಫೇಸ್‌ಬುಕ್ ಜಗಳದಿಂದ ಸಾರ್ವಜನಿಕರಿಗೆ ಪುಕ್ಕಟ್ಟೆ ಮನರಂಜನೆ ಸಿಕ್ಕಂತಾಗಿದೆ. 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿಯ ಚುನಾವಣಾ ಅಕ್ರಮ ಪ್ರತಿಭಟನೆ ಕಪಟ ನಾಟಕ: ಬಿವೈ ವಿಜಯೇಂದ್ರ

ನನ್ನನ್ನು ನಾನು ದ್ವೇಷಿಸುತ್ತೇನೆ, ನಾನು ಸೋತವನು: ಹೀಲಿಯಂ ಅನಿಲ ಸೇವಿಸಿ ಸಿಎ ಆತ್ಮಹತ್ಯೆ

ಧರ್ಮಸ್ಥಳದಲ್ಲಿ ಎರಡನೇ ದಿನ ಹುಡುಕಾಡುತ್ತಿರುವ ಎಸ್ಐಟಿ ತಂಡಕ್ಕೆ ಸಿಕ್ಕಿದ್ದೇನು

ಧರ್ಮಸ್ಥಳ: 6 ಅಡಿ ಅಗೆದರೂ ಸಿಗದ ಕಳೆಬರಹ, ಕಾರ್ಯಚರಣೆಯಲ್ಲಿ ಬಿಗ್‌ಟ್ವಿಸ್ಟ್‌

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments