Select Your Language

Notifications

webdunia
webdunia
webdunia
webdunia

ಗ್ರಾಮ ಸ್ವರಾಜ್ ಸಮಾವೇಶ: ರಾಹುಲ್ ಮಾರ್ಗಸೂಚಿ ಭಾಷಣ

ಗ್ರಾಮ ಸ್ವರಾಜ್ ಸಮಾವೇಶ: ರಾಹುಲ್ ಮಾರ್ಗಸೂಚಿ ಭಾಷಣ
ಬೆಂಗಳೂರು , ಶುಕ್ರವಾರ, 9 ಅಕ್ಟೋಬರ್ 2015 (16:28 IST)
ಮುಂಬರುವ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿನ ನಗರದ ಅರಮನೆ ಮೈದಾನದಲ್ಲಿ ಗ್ರಾಮ ಸ್ವರಾಜ್ ಸಮಾವೇಶವನ್ನು ಆಯೋಜಿಸಲಾಗಿದ್ದು, ಸಮಾವೇಶದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಮಾರ್ಗಸೂಚಿ ಭಾಷಣ ಮಾಡಲಿದ್ದಾರೆ. 
 
ಪ್ರಸ್ತುತ ರಾಜ್ಯ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಅವರು ಮಂಡ್ಯ ಜಿಲ್ಲೆಯ ಆತ್ಮಹತ್ಯೆ ಮಾಡಿಕೊಂಡ ರೈತರ ಮನೆಗಳಿಗೆ ಭೇಟಿ ನೀಡುತ್ತಿದ್ದಾರೆ. ಈ ಭೇಟಿಯು ಪ್ರಸ್ತುತ ಮುಗಿದಿದ್ದು, ಮಂಡ್ಯದ ವಿಸಿ ಫಾರ್ಮ್ ನಿಂದ ಮತ್ತೆ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದು, ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 
 
ಇನ್ನು ರಾಜ್ಯದ ಗ್ರಾಮೀಣಾಭಿವೃದ್ಧಿ ಇಲಾಖೆಯ ಸಹಯೋಗದೊಂದಿಗೆ ಹಮ್ಮಿಕೊಂಡಿರುವ ಈ ಕಾರ್ಯಕ್ರಮವನ್ನು ಮುಂದಿನ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದು, ಗ್ರಾಮೀಣ ಭಾಗದ ಅಭಿವೃದ್ಧಿ ಬಗ್ಗೆ ಚರ್ಚಿಸಲು ಈ ಸಮಾವೇಶವನ್ನು ಆಯೋಜಿಸಲಾಗಿದೆ.   

Share this Story:

Follow Webdunia kannada