Webdunia - Bharat's app for daily news and videos

Install App

ಕರ್ನಾಟಕದಲ್ಲಿ ಅಮೃತ ಶಾಲೆಗಳ ಸ್ಥಾಪನೆಗೆ ಅನುದಾನ

Webdunia
ಮಂಗಳವಾರ, 25 ಜನವರಿ 2022 (15:32 IST)
ಬೆಂಗಳೂರು : ಕರ್ನಾಟಕದಲ್ಲಿ 75 ನೇತಾಜಿ ಅಮೃತ ಶಾಲೆಗಳನ್ನು ಘೋಷಿಸಿ ರಾಜ್ಯ ಸರ್ಕಾರ ಮಂಗಳವಾರ ಅಧಿಕೃತ ಆದೇಶ ಹೊರಡಿಸಿದೆ.

ಜನವರಿ 23ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತಾಜಿ ಶಾಲೆಗಳನ್ನು ಘೋಷಿಸಿದ್ದರು. ನೇತಾಜಿ ಶಾಲೆಗಳಿಗೆ ₹ 9 ಕೋಟಿ ಅನುದಾನವನ್ನೂ ಮಂಜೂರು ಮಾಡಿದ್ದರು.

ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಆದ ಹಿನ್ನೆಲೆಯಲ್ಲಿ 75 ಎನ್ಸಿಸಿ ಯುನಿಟ್ ಆರಂಭಿಸಿ 7,500 ಕೆಡೆಟ್‌ಗಳಿಗೆ ಅವಕಾಶ ನೀಡಲಾಗುವುದು ಎಂದು ಬೊಮ್ಮಾಯಿ ತಿಳಿಸಿದ್ದರು.

ನೇ7,500 ವಿದ್ಯಾರ್ಥಿಗಳಿಗೆ ವರ್ಷಕ್ಕೆ ತಲಾ ₹ 12 ಸಾವಿರ ಖರ್ಚಾಗಲಿದೆ. ಈ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಮಾಹಿತಿ ನೀಡಿದ್ದರು.

ಕರ್ನಾಟಕದ ವಿವಿಧ ಶಾಲೆಗಳಲ್ಲಿ 44 ಸಾವಿರ ಕೆಡೆಟ್‌ಗಳಿದ್ದಾರೆ. ಇವರನ್ನು ಕಾಲೇಜುಗಳ ಜೊತೆ ವಿಲೀನಗೊಳಿಸಿ ಕೆಡೆಟ್ಗಳ ಸಂಖ್ಯೆಯನ್ನು 50 ಸಾವಿರಕ್ಕೆ ಏರಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಆದರೆ ಇದಕ್ಕೆ ರಕ್ಷಣಾ ಇಲಾಖೆ ಅನುಮತಿ ಬೇಕಿದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments