ಗೃಹಲಕ್ಷ್ಮಿ ಯೋಜನೆ ಹಣ ಕೂಡಿಟ್ಟು ಊರಿಗೆ ಗ್ರಂಥಾಲಯ ಕಟ್ಟಿಸಿದ ಮಹಿಳೆ

Sampriya
ಭಾನುವಾರ, 13 ಅಕ್ಟೋಬರ್ 2024 (17:10 IST)
Photo Courtesy X
ಬೆಳಗಾವಿ: ಗೃಹಲಕ್ಷ್ಮೀ ಹಣವನ್ನು ಕೂಡಿಟ್ಟು ತನ್ನ ಊರಿಗೆ ಹೋಳಿಗೆಯೂಟ, ಸೊಸೆಯ ಜೀವನಕ್ಕೆ ಫ್ಯಾನ್ಸಿ ಶಾಪ್ ಹಾಗೂ ಮಗನಿಗೆ ಬೈಕ್‌ ಅನ್ನು ಉಡುಗೊರೆಯಾಗಿ ಕೊಟ್ಟಿದ್ದು ನಾವೆಲ್ಲ ಕೇಳಿದ್ದೇವೆ.

ಆದರೆ ಬೆಳಗಾವಿಯ ರಾಯಭಾಗ ತಾಲ್ಲೂಕಿನ ಮಂಟೂರು ಗ್ರಾಮದ ಮಹಿಳೆಯೊಬ್ಬರು ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗ್ರಂಥಾಲಯ ನಿರ್ಮಾಣ ಮಾಡಿ ಸುದ್ದಿಯಾಗಿದ್ದಾರೆ.

ಗ್ರಾಮದ ಪಂಚಾಯಿತಿಯ ಮಲ್ಲವ್ವ ಭೀಮಪ್ಪ ಮೇಟಿ ಮಹಿಳೆ ಇದೀಗ ಭವಿಷ್ಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಆಕಾಂಕ್ಷಿಗಳಿಗೆ ಸಹಾಯವಾಗಲೆಂದು ಗ್ರಂಥಾಲಯ ನಿರ್ಮಾಣ ಮಾಡಿದ್ದಾರೆ.

ಈ ಬಗ್ಗೆ ಅವರು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಫೋಸ್ಟ್ ಹಂಚಿಕೊಂಡಿದ್ದಾರೆ. ಇದನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಡೆವಲಪ್‌ಮೆಂಟ್‌ ಕಮೀಷನರ್ ಉಮಾ ಮಹದೇವನ್ ದಾಸ್‌ಗುಪ್ ಹಾಗೂ ಸಿಎಂ ಸಿದ್ದರಾಮಯ್ಯಗೆ ಅವರು ಟ್ಯಾಗ್ ಮಾಡಿದ್ದಾರೆ.

ಮಂಟೂರು ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರು ಹಾಗೂ ಹಾಲಿ ಸದಸ್ಯರಾಗಿರುವ ಮಲ್ಲವ್ವ ಅವರ ನಡೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು: ಇನ್ನೇನೂ ಮದುವೆಗೆ ಎರಡು ದಿನವಿರುವಾಗ ನಾಪತ್ತೆಯಾದ ಹುಡುಗು, ಕೊನೆಗೂ ಪತ್ತೆ

ಅಕ್ರಮವಾಗಿ ಭಾರತಕ್ಕೆ ಬಂದಿದ್ದ 10 ಬಾಂಗ್ಲಾದೇಶಿ ಪ್ರಜೆಗಳಿಗೆ 2 ವರ್ಷ ಜೈಲು

ಬಿಜೆಪಿ ಚುನಾವಣಾ ಆಯೋಗವನ್ನು ಬಳಸಿಕೊಂಡು, ನಿರ್ದೇಶಿಸುತ್ತಿದೆ: ರಾಹುಲ್ ಗಾಂಧಿ

ಆರ್ ಅಶೋಕ್ ಎದುರೇ ನಾನೇ ವಿರೋಧ ಪಕ್ಷದ ನಾಯಕನೆಂದ ಬಸನಗೌಡ ಪಾಟೀಲ್ ಯತ್ನಾಳ್

ತಮನ್ನಾ ಭಾಟಿಯಾ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments