Webdunia - Bharat's app for daily news and videos

Install App

ಫ್ಲೆಕ್ಸ್ ತೆರವು: ಚಾಮರಾಜನಗರದಲ್ಲಿ ಗುಂಪು ಘರ್ಷಣೆ, ಕಲ್ಲು ತೂರಾಟ

Webdunia
ಭಾನುವಾರ, 19 ಏಪ್ರಿಲ್ 2015 (11:11 IST)
ಚಾಮರಾಜನಗರದಲ್ಲಿ ಎರಡು ಗುಂಪುಗಳ ನಡುವೆ ಮತ್ತೆ ಗುಂಪು ಘರ್ಷಣೆ ನಡೆದಿದ್ದು, ಪೊಲೀಸರು ಲಾಠಿ ಪ್ರಹಾರ ನಡೆಸಿದರು.  ನಿನ್ನೆ ರಾತ್ರಿ ಫ್ಲೆಕ್ಸ್ ತೆರವು ಸಂಬಂಧಪಟ್ಟಂತೆ ಎರಡು ಗುಂಪುಗಳ ನಡುವೆ ಘರ್ಷಣೆಯಾಗಿತ್ತು.

ಧರಣಿಯ ವೇಳೆ ಎರಡು ಗುಂಪುಗಳ ನಡುವೆ ಮತ್ತೆ ಕಲ್ಲು ತೂರಾಟ ನಡೆದು  ಸಂತೆಮರಹಳ್ಳಿ ಸರ್ಕಲ್ ಬಳಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಪೊಲೀಸರು ಜನರನ್ನು ಚದುರಿಸಲು ಅಶ್ರುವಾಯು ಸಿಡಿಸಿದರು.

ಉಪ್ಪಾರ ಬಡಾವಣೆ, ನಾಯಕ ಬಡಾವಣೆಯಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ.ಭಗೀರಥ ಉತ್ಸವ ಆಚರಣೆ ಸಂಬಂಧ ಫ್ಲೆಕ್ಸ್ ಹಾಕಲಾಗಿತ್ತು. ಆದರೆ ಒಂದು  ಗುಂಪಿನ ಜನರು ಫ್ಲೆಕ್ಸ್ ತೆರವುಗೊಳಿಸಿದ್ದರಿಂದ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಉದ್ರಿಕ್ತರ ಗುಂಪು ಪರಿಸ್ಥಿತಿ ನಿಯಂತ್ರಣಕ್ಕೆ ಯತ್ನಿಸಿದ ಪೊಲೀಸರ ಮೇಲೂ ಕಲ್ಲುತೂರಾಟ ನಡೆಸಿದರು. ಶಾಸಕ ಪುಟ್ಟರಂಗಶೆಟ್ಟಿ ಶಾಂತಿ ಕಾಪಾಡುವಂತೆ ಮನವಿ ಮಾಡಿದರೂ ಅವರ ಎದುರೇ ಜನರು ಪರಸ್ಪರ ಕಲ್ಲುತೂರಾಟ ನಡೆಸಿದರೆಂದು ತಿಳಿದುಬಂದಿದೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

Show comments