Webdunia - Bharat's app for daily news and videos

Install App

ಗೃಹಲಕ್ಷ್ಮಿ ಹಣ ನಿಮ್ಮ ಖಾತೆಗೆ ಬಂತೇ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನಂಬಿ ಕೂತವರ ಕತೆ ಏನಾಯ್ತು

Krishnaveni K
ಬುಧವಾರ, 21 ಆಗಸ್ಟ್ 2024 (09:50 IST)
ಬೆಂಗಳೂರು: ಈ ವರಮಹಾಲಕ್ಷ್ಮಿ ಹಬ್ಬದ ವೇಳೆ ಗೃಹ ಲಕ್ಷ್ಮಿ ಯೋಜನೆಯ ಹಣವೂ ನಿಮ್ಮ ಖಾತೆಗೆ ಸೇರುತ್ತೆ ಎಂದಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ಸುಳ್ಳಾಗಿದೆ. ಇದೀಗ ಜನ ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ.

ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯಲ್ಲಿ ಗೃಹಲಕ್ಷ್ಮಿ ಯೋಜನೆಯೂ ಒಂದು. ಈ ಯೋಜನೆಯಡಿಯಲ್ಲಿ ಮನೆ ಯಜಮಾನಿಗೆ ತಿಂಗಳಿಗೆ 2 ಸಾವಿರ ರೂ. ಖಾತೆಗೆ ಜಮೆಯಾಗುತ್ತದೆ. ಆದರೆ ಕಳೆದ ಎರಡು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಮನೆ ಯಜಮಾನಿಯರ ಖಾತೆಗೆ ಬಂದಿಲ್ಲ.

ಇದರ ಬಗ್ಗೆ ಮಹಿಳೆಯರು ಎಲ್ಲೇ ಹೋದರೂ ಸಚಿವರನ್ನು ಕೇಳುತ್ತಲೇ ಇದ್ದಾರೆ. ಕಳೆದ ವಾರ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೃಹಲಕ್ಷ್ಮೀ ಯೋಜನೆಯ ಕಂತಿನ ಹಣ ಬಿಡುಗಡೆಯಾಗಿದೆ. ಸದ್ಯದಲ್ಲೇ ನಿಮ್ಮ ಖಾತೆಗೆ ಹಣ ಬರಲಿದೆ ಎಂದಿದ್ದರು. ಹೀಗಾಗಿ ವರಮಹಾಲಕ್ಷ್ಮಿ ಹಬ್ಬಕ್ಕೆ ಹಣ ಬರುತ್ತದೆ ಎಂದು ಮಹಿಳೆಯರು ಕಾತುರದಿಂದ ಕಾದಿದ್ದರು.

ಆದರೆ ಇದೀಗ ಮಹಿಳೆಯರಿಗೆ ತಮ್ಮ ಖಾತೆಗೆ ಹಣ ಜಮೆ ಆಗಿದೆಯಾ ಎಂದು ನೋಡಿ ಇಲ್ಲದೇ ಇರುವುದು ನೋಡಿ ನಿರಾಸೆಯೇ ಗ್ಯಾರಂಟಿಯಾಗಿದೆ. ಭರವಸೆ ನೀಡಿ 15 ದಿನಗಳಾಗುತ್ತಾ ಬಂದರೂ ಮಹಿಳೆಯರ ಖಾತೆಗೆ ಹಣ ಜಮಾವಣೆ ಆಗಿಲ್ಲ. ಇದೀಗ ರಾಜ್ಯ ಸರ್ಕಾರವಂತೂ ಮುಡಾ ಹಗರಣದ ಬಿಸಿಯಲ್ಲಿ ಮುಳುಗಿ ಹೋಗಿದೆ. ಜೊತೆಗೆ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದೇ ದೊಡ್ಡ ತಲೆನೋವಾಗಿದೆ. ಹೀಗಾಗಿ ಗ್ಯಾರಂಟಿ ಯೋಜನೆಗಳು ಕೇವಲ ಬಡವರಿಗೆ ಮಾತ್ರ ಮೀಸಲಾಗುವಂತೆ ಮಾಡಲು ಏನಾದರೂ ದಾರಿ ಇದೆಯಾ ಎಂದು ಹುಡುಕುತ್ತಿದೆ. ಈ ನಡುವೆ ಗೃಹಲಕ್ಷ್ಮಿ ಹಣ ಬರದೇ ಇರುವುದು ನೋಡಿದರೆ ಸರ್ಕಾರ ಆರ್ಥಿಕ ಸಂಕಷ್ಟದಲ್ಲಿದೆಯಾ ಎಂಬ ಅನುಮಾನ ಮೂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಮುಂದಿನ ಸುದ್ದಿ
Show comments