ಗೃಹಲಕ್ಷ್ಮಿ ಹಣ ಹಾಕಿ ಎಂದಿದ್ದಕ್ಕೆ ಸರ್ಕಾರ ಹೀಗೆ ಮಾಡೋದಾ, ಮಹಿಳೆಯರ ಆಕ್ರೋಶಕ್ಕೆ ಕಾರಣವೇನು

Krishnaveni K
ಮಂಗಳವಾರ, 15 ಅಕ್ಟೋಬರ್ 2024 (09:41 IST)
Photo Credit: X
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳ ಖಾತೆಗೆ ಬಂದಿದೆ. ಆದರೆ ಅದನ್ನು ನೋಡಿ ಮಹಿಳೆಯರು ಸಿಟ್ಟಾಗಿದ್ದಾರೆ. ಅವರ ಆಕ್ರೋಶಕ್ಕೆ ಕಾರಣವೇನು ಗೊತ್ತಾ?

ಕಳೆದ ಮೂರು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಖಾತೆಗೆ ಬಂದಿಲ್ಲ ಎಂದು ಫಲಾನುಭವಿಗಳು ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದರು. ಆದರೆ ಸರ್ವರ್ ಸಮಸ್ಯೆ, ತಾಂತ್ರಿಕ ಸಮಸ್ಯೆ ಎಂದೆಲ್ಲಾ ಏನೇನೋ ನೆಪಗಳು ಸಚಿವರಿಂದಲೂ ಬರುತ್ತಲೇ ಇತ್ತು. ಇತ್ತೀಚೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಸರಾ ಹಬ್ಬದ ಸಂದರ್ಭದಲ್ಲಿ ಎರಡು ದಿನಗಳಾಗಿ ಜೂನ್ ಮತ್ತು ಜುಲೈ ತಿಂಗಳ ಹಣ ಜಮೆ ಮಾಡುವುದಾಗಿ ಭರವಸೆ ನೀಡಿದ್ದರು.

ಇದೇ ತಿಂಗಳು ಅಕ್ಟೋಬರ್ 7 ಮತ್ತು 9 ರಂದು ಹಣ ಬರಲಿದೆ ಎಂದು ಸಚಿವರು ಭರವಸೆ ನೀಡಿದ್ದರು. ಅದರಂತೆ ಫಲಾನುಭವಿಗಳಿಗೆ ತಮ್ಮ ಬ್ಯಾಂಕ್ ಖಾತೆ ಪರಿಶೀಲನೆ ನಡೆಸಿದಾಗ ಕೇವಲ ಜೂನ್ ತಿಂಗಳ ಹಣ ಮಾತ್ರ ಜಮೆ ಆಗಿದೆ. ಜುಲೈ ತಿಂಗಳ ಹಣ ಹೇಳಿದಂತೆ ಬಂದೇ ಇಲ್ಲ. ಇದರಿಂದ ಮಹಿಳೆಯರು ಆಕ್ರೋಶಗೊಂಡಿದ್ದಾರೆ.

ಕೆಲವರ ಖಾತೆಗೆ ಹಣ ಜಮೆ ಆಗಿದೆ. ಕೆಲವರಿಗೆ ಇನ್ನೂ ಆಗಿಲ್ಲ. ಹಣ ಜಮೆ ಆಗಿದೆಯಾ ಎಂದು ಬ್ಯಾಂಕ್ ಗೆ ಅಲೆದು ಮಹಿಳೆಯರು ಸುಸ್ತಾಗಿದ್ದಾರೆ. ಆದರೆ ಎಲ್ಲರ ಖಾತೆಗೆ ಹಣ ಹಾಕಲು ನಾವು ಬಿಲ್ ಕ್ಲಿಯರೆನ್ಸ್ ಮಾಡಿದ್ದೇವೆ. ತಾಂತ್ರಿಕ ಸಮಸ್ಯೆಯಿಂದ ನಿಧಾನವಾಗಿರಬಹುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಮಜಾಯಿಷಿ ನೀಡಿದ್ದಾರೆ. ಆದರೆ ಇದು ಮಹಿಳೆಯರು ಸಿಟ್ಟು ತಣ್ಣಗಾಗಿಸಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಮುಂದಿನ ಸುದ್ದಿ
Show comments