Webdunia - Bharat's app for daily news and videos

Install App

ಗೃಹಲಕ್ಷ್ಮಿ ಹಣಕ್ಕಾಗಿ ಕಾಯುತ್ತಿದ್ದೀರಾ ಇಲ್ಲಿದೆ ಲೇಟೆಸ್ಟ್ ಅಪ್ ಡೇಟ್

Krishnaveni K
ಶುಕ್ರವಾರ, 8 ನವೆಂಬರ್ 2024 (10:08 IST)
ಬೆಂಗಳೂರು: ದಸರಾ ಹಬ್ಬದ ಸಂದರ್ಭದಲ್ಲಿ ಎರಡು ಕಂತಿನ ಗೃಹಲಕ್ಷ್ಮಿ ಹಣ ಬಿಡುಗಡೆಯಾಗಿತ್ತು. ಅದಾದ ಬಳಿಕ ಹಣವೇ ಬಂದಿಲ್ಲ ಎಂದು ಹಿಡಿಶಾಪ ಹಾಕುತ್ತಿದ್ದವರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ಕೊಟ್ಟಿದ್ದಾರೆ.

ಜೂನ್ ತಿಂಗಳಲ್ಲಿ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡಿದ್ದ ರಾಜ್ಯ ಸರ್ಕಾರ ಬಳಿಕ ಎರಡು ತಿಂಗಳು ಸೈಲೆಂಟ್ ಆಗಿತ್ತು. ಈ ನಡುವೆ ಜನರು ಗೃಹಲಕ್ಷ್ಮಿಯೆಲ್ಲಾ ಬೋಗಸ್ ಎಂದು ಹಿಡಿಶಾಪ ಹಾಕಲು ಆರಂಭಿಸಿದ್ದರು. ಹಲವು ಬಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಈಗ ಬರುತ್ತೆ ಆಗ ಬರುತ್ತೆ ಎಂದು ಹೇಳಿಕೆ ನೀಡಿದ್ದರೂ ಹಣ ಮಾತ್ರ ಬಂದಿರಲಿಲ್ಲ.

ಸರ್ವರ್ ಸಮಸ್ಯೆ, ತಾಂತ್ರಿಕ ಸಮಸ್ಯೆ ಎಂದೆಲ್ಲಾ ಸರ್ಕಾರ ಕಾರಣ ಕೊಡುತ್ತಲೇ ಇತ್ತು. ಕೊನೆಗೂ ಅಕ್ಟೋಬರ್ ನಲ್ಲಿ ಎರಡು ಕಂತು ಬಿಡುಗಡೆಯಾಗಿತ್ತು. ಇದೀಗ ಅಕ್ಟೋಬರ್ ಕಂತಿನ ಗೃಹಲಕ್ಷ್ಮಿ ಹಣ ಯಾವಾಗ ಬರುತ್ತದೆ ಎಂದು ಫಲಾನುಭವಿ ಮಹಿಳೆಯರು ಪ್ರಶ್ನೆ ಮಾಡುತ್ತಿದ್ದಾರೆ.

ಅವರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಸದ್ಯದಲ್ಲೇ ಗೃಹಲಕ್ಷ್ಮಿ ಮತ್ತೊಂದು ಕಂತು ಬಿಡುಗಡೆ ಮಾಡುವುದಾಗಿ ಸಿಎಂ ಭರವಸೆ ನೀಡಿದ್ದಾರೆ. ಇದಕ್ಕೆ ಮೊದಲು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಳೆದ ತಿಂಗಳಿನ ಕಂತು ಈ ತಿಂಗಳು ಬಿಡುಗಡೆಯಾಗಲಿದೆ. ಅದೇ ರೀತಿ ಪ್ರತೀ ತಿಂಗಳು ನಡೆಯುವುದಾಗಿ ಹೇಳಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Rains: ವೀಕೆಂಡ್ ನಲ್ಲಿ ಮಳೆ ಬರಲಿದೆಯಾ ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿರಾ ಗಾಂಧಿ ದಾಖಲೆ ಹಿಂದಿಕ್ಕಿ ದೀರ್ಘಾವಧಿ ಪ್ರಧಾನಿ ಹೆಗ್ಗಳಿಕೆಗೆ ಪಾತ್ರವಾದ ನರೇಂದ್ರ ಮೋದಿ

ಉಡುಪಿಯಲ್ಲಿ ಮುಂದಿನ 2 ದಿನ ಭಾರೀ ಗಾಳಿ ಮಳೆ, ರೆಡ್ ಅಲರ್ಟ್ ಘೋಷಣೆ

ಪರಿಷ್ಕೃತ ಶಾಲಾ ಸಮಯವನ್ನು ಮುಂದುವರೆಸುವಂತೆ ಕೇರಳ ಸರ್ಕಾರ ಸೂಚನೆ

ಮೈಸೂರು ಮಹಾರಾಜರಿಗಿಂತಲೂ ಗ್ರೇಟ್ ನಮ್ಮಪ್ಪ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಮುಂದಿನ ಸುದ್ದಿ
Show comments