ಗೃಹಲಕ್ಷ್ಮಿ ಹಣಕ್ಕಾಗಿ ಕಾಯುತ್ತಿರುವವರಿಗೆ ಮತ್ತೆ ನಿರಾಸೆ

Krishnaveni K
ಬುಧವಾರ, 5 ಫೆಬ್ರವರಿ 2025 (14:18 IST)
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಜನಪ್ರಿಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯ ಹಣ ಕಳೆದ ಮೂರು ತಿಂಗಳಿನಿಂದ ಬಾಕಿಯಿದ್ದು ಹಣಕ್ಕಾಗಿ ಕಾಯುತ್ತಿರುವ ಫಲಾನುಭವಿಗಳಿಗೆ ನಿರಾಸೆ ಕಾದಿದೆ.

ಗೃಹಲಕ್ಷ್ಮಿ ಯೋಜನೆಯಡಿ ಕುಟುಂಬದ ಯಜಮಾನಿಯ ಖಾತೆಗೆ ಪ್ರತೀ ತಿಂಗಳು 2,000 ರೂ. ಕ್ರೆಡಿಟ್ ಆಗಬೇಕು. ಆದರೆ ಕಳೆದ ಮೂರು ತಿಂಗಳಿನಿಂದ ಸರಿಯಾಗಿ ಹಣ ಕ್ರೆಡಿಟ್ ಆಗಿಲ್ಲ.  ಈ ಕಾರಣಕ್ಕೆ ಫಲಾನುಭವಿಗಳು ಸರ್ಕಾರಕ್ಕೆ ಹಿಡಿ ಶಾಪ ಹಾಕುತ್ತಿದ್ದಾರೆ.

ಗೃಹಲಕ್ಷ್ಮಿ ಹಣದ ಬಗ್ಗೆ ಕೇಳಿದರೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತೀ ಬಾರಿಯೂ ಒಂದಿಲ್ಲೊಂದು ಸಮಜಾಯಿಷಿ ಕೊಡುತ್ತಲೇ ಇರುತ್ತಾರೆ. ಸರ್ವರ್ ಸಮಸ್ಯೆ, ತಾಂತ್ರಿಕ ಸಮಸ್ಯೆ ಎನ್ನುತ್ತಾರೆ. ಇಲ್ಲವೇ ಈ ತಿಂಗಳಿನ ಹಣ ಮುಂದಿನ ತಿಂಗಳು ಹಾಕುತ್ತೇವೆ ಎನ್ನುತ್ತಾರೆ.

ಆದರೆ ಕಳೆದ ತಿಂಗಳು ಮಾತ್ರವಲ್ಲ, ಮೂರು ತಿಂಗಳಿನಿಂದ ಸರಿಯಾಗಿ ಹಣ ಬಂದಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇಂಥಾ ಚಂದಕ್ಕೆ ಯೋಜನೆ ಯಾಕೆ ಘೋಷಿಸಬೇಕಿತ್ತು ಎಂದು ಹಿಡಿಶಾಪ ಹಾಕುತ್ತಿದ್ದಾರೆ. ಸದ್ಯಕ್ಕೆ ಫಲಾನುಭವಿಗಳ ಪಟ್ಟಿ ನವೀಕರಿಸಲಾಗುತ್ತಿದೆ. ಇದೇ ಕಾರಣಕ್ಕೆ ಲೇಟ್ ಆಗಿದೆ ಎಂಬ ಉತ್ತರ ಬರುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments