Webdunia - Bharat's app for daily news and videos

Install App

ಗೃಹಲಕ್ಷ್ಮಿ 4 ಸಾವಿರಕ್ಕೆ ಹೆಚ್ಚಿಸ್ತೀವಿ ಎಂದ ಕಾಂಗ್ರೆಸ್ ಶಾಸಕ: ಇರೋದನ್ನು ನೆಟ್ಟಗೆ ಕೊಡಿ ಎಂದು ಜನ

Krishnaveni K
ಗುರುವಾರ, 20 ಮಾರ್ಚ್ 2025 (09:46 IST)
ಬೆಂಗಳೂರು: ನಿನ್ನೆ ವಿಧಾನಸಭೆ ಅಧಿವೇಶನದಲ್ಲಿ ಕಾಂಗ್ರೆಸ್ ಶಾಸಕ ಕುಣಿಗಲ್ ರಂಗನಾಥ್ ಮತ್ತೆ ನಾವು ಅಧಿಕಾರಕ್ಕೆ ಬಂದರೆ ಗೃಹಲಕ್ಷ್ಮಿ ಹಣ 4 ಸಾವಿರ ರೂ.ಗೆ ಏರಿಕೆ ಮಾಡ್ತೀವಿ ಎಂದು ಘೋಷಣೆ ಮಾಡಿದ್ದಾರೆ. ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಾರ್ವನಿಕರು ಈಗ ಇರೋದನ್ನೇ ನೆಟ್ಟಗೆ ಕೊಡಿ ಎಂದು ಕಾಲೆಳೆದಿದ್ದಾರೆ.

ಕರ್ನಾಟಕ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯೂ ಒಂದು. ಇದರಲ್ಲಿ ಪ್ರತೀ ಮನೆಯ ಓರ್ವ ಮಹಿಳೆಗೆ ತಿಂಗಳಿಗೆ 2,000 ರೂ. ನೀಡಲಾಗುತ್ತದೆ. ಆದರೆ ಗೃಹಲಕ್ಷ್ಮಿ ಹಣವನ್ನು ಸರಿಯಾಗಿ ತಿಂಗಳಿಗೊಮ್ಮೆ ಸರ್ಕಾರ ಖಾತೆಗೆ ಹಾಕುತ್ತಿಲ್ಲ ಎಂಬ ಆರೋಪವಿದೆ. ಕಳೆದ ಕೆಲವು ತಿಂಗಳು ವ್ಯತ್ಯಯವಾಗಿದ್ದೂ ಇದೆ.

ಈ ಬಗ್ಗೆ ಸದನದಲ್ಲೂ ಚರ್ಚೆಯಾಗಿದೆ. ಈ ನಡುವೆ ಕಾಂಗ್ರೆಸ್ ಶಾಸಕ ರಂಗನಾಥ್ ನಾವು ಮತ್ತೆ ಅಧಿಕಾರಕ್ಕೆ ಬಂದರೆ ಗೃಹಲಕ್ಷ್ಮಿ ಹಣವನ್ನು 4 ಸಾವಿರ ರೂ.ಗೆ ಏರಿಕೆ ಮಾಡಲಿದ್ದೇವೆ ಎಂದು ಘೋಷಣೆ ಮಾಡಿದ್ದಾರೆ.

ಅವರ ಈ ಹೇಳಿಕೆಗೆ ಸಾರ್ವಜನಿಕರು ಸೋಷಿಯಲ್ ಮೀಡಿಯಾದಲ್ಲಿ ಸ್ವಾರಸ್ಯಕರವಾಗಿ ಪ್ರತಿಕ್ರಿಯಿಸಿದ್ದಾರೆ. ಈಗ ಕೊಡುವ ಹಣವನ್ನೇ ಸರಿಯಾಗಿ ನೀಡುತ್ತಿಲ್ಲ. ಇನ್ನು 4,000 ರೂ. ಬೇರೆ ಕೊಡ್ತೀರಾ? ಈಗ ಘೋಷಿಸಿರುವ ಹಣವನ್ನು ತಿಂಗಳಿಗೆ ಸರಿಯಾಗಿ ಖಾತೆಗೆ ಹಾಕಿ. ಆ ಬಳಿಕವೇ 4 ಸಾವಿರ ರೂ. ಮಾತು ಎಂದು ನೆಟ್ಟಿಗರು ಟಾಂಗ್ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments