ಗೃಹಲಕ್ಷ್ಮಿ ಹಣ ಕರೆಕ್ಟ್ ಆಗಿ ಖಾತೆಗೆ ಬರಬೇಕೆಂದರೆ ಈ ಎರಡು ನಿಯಮ ಪಾಲಿಸಬೇಕು

ಕೃಷ್ಣವೇಣಿ ಕೆ
ಸೋಮವಾರ, 20 ಜುಲೈ 2026 (11:00 IST)
ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆ ಹಣ ನಿಮ್ಮ ಖಾತೆಗೆ ಬರಬೇಕೆಂದರೆ ಈ ಎರಡು ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಲೇಬೇಕು.
 

ಪ್ರತೀ ತಿಂಗಳು ಮನೆಯ ಯಜಮಾನಿಯ ಖಾತೆಗೆ 2,000 ರೂ. ಹಣ ನೀಡುವುದೇ ಗೃಹಲಕ್ಷ್ಮಿ ಯೋಜನೆಯಾಗಿದೆ. ಈ ಯೋಜನೆ ದುರುಪಯೋಗವಾಗುತ್ತಿದೆ ಎಂಬ ಕಾರಣಕ್ಕೆ ಈಗ ಸರ್ಕಾರ ಪರಿಷ್ಕರಣೆ ಮಾಡುತ್ತಿದ್ದು ಕಟ್ಟು ನಿಟ್ಟಿನ ನಿಯಮಗಳನ್ನು ಹಾಕಿದೆ.

ಗೃಹಲಕ್ಷ್ಮಿ ಹಣ ನಿಮ್ಮ ಖಾತೆಗೆ ಬರಬೇಕೆಂದರೆ ಈ ಎರಡು ನಿಯಮಗಳನ್ನು ಪಾಲಿಸುವುದು ಕಡ್ಡಾಯ ಎಂದು ಸಿಎಂ ಡಿಕೆ ಶಿವಕುಮಾರ್ ಖಡಕ್ ಸೂಚನೆ ನೀಡಿದ್ದಾರೆ. ಗೃಹಲಕ್ಷ್ಮಿ ಹಣ ಬರಬೇಕೆಂದರೆ ನಿಮ್ಮ ಫೋನ್ ನಂಬರ್ ಮತ್ತು ಬ್ಯಾಂಕ್ ಖಾತೆ ಸರಿಯಾಗಿರಬೇಕು.

ಗೃಹಲಕ್ಷ್ಮಿ ಯೋಜನೆ ಯಾರು ಪಡೆಯುತ್ತಾರೋ ಅವರ ಮೊಬೈಲ್ ಸಂಖ್ಯೆ ಒದಗಿಸಬೇಕಾಗುತ್ತದೆ. ಆ ಮೊಬೈಲ್ ಸಂಖ್ಯೆಗೆ ಹಣ ಸಂದಾಯವಾದ ಸಂದೇಶ ಬರುತ್ತದೆ. ಆದರೆ ಎಷ್ಟೋ ಮಂದಿ ತಮ್ಮ ಮನೆಯವರು, ಮಕ್ಕಳ ಫೋನ್ ನಂಬರ್ ಕೊಟ್ಟಿರುತ್ತಾರೆ. ಆದರೆ ಇನ್ನು ಮುಂದೆ ಹೀಗಾಗಲ್ಲ. ಫಲಾನುಭವಿ ಮಹಿಳೆಯ ಮೊಬೈಲ್ ನಂಬರ್ ನ್ನೇ ನೀಡಬೇಕು.

ಎರಡನೆಯದಾಗಿ, ಬ್ಯಾಂಕ್ ಖಾತೆ ಕೂಡಾ ಫಲಾನುಭವಿಗಳದ್ದೇ ಆಗಿರಬೇಕು. ಫಲಾನುಭವಿಗಳು ತಮ್ಮ ಮಕ್ಕಳ ಅಥವಾ ಗಂಡನ ಇಲ್ಲವೇ ಇನ್ನಿತರ ಸದಸ್ಯರ ಹೆಸರಿನಲ್ಲಿರುವ ಖಾತೆ ನೀಡಿದರೆ ಇನ್ನು ಹಣ ಸಂದಾಯವಾಗಲ್ಲ. ಫಲಾನುಭವಿಗಳೇ ತಮ್ಮ ಹೆಸರಿನಲ್ಲಿರುವ ಖಾತೆಯನ್ನೇ ನೀಡಬೇಕು ಎಂದು ಸಿಎಂ ಖಡಕ್ ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka weather: ವಾರವಿಡೀ ರಾಜ್ಯದಲ್ಲಿ ಮಳೆಯಿರುತ್ತಾ, ಇಲ್ಲಿದೆ ಹವಾಮಾನ ವರದಿ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments