Webdunia - Bharat's app for daily news and videos

Install App

ಭ್ರಷ್ಟರ ಪಕ್ಷ ಕಾಂಗ್ರೆಸ್‌ನಲ್ಲಿ ಜೈಲಿಗೆ ಹೋಗಿ ಬಂದವರಿಗೆ ರಾಜಾತಿಥ್ಯ ಗ್ಯಾರಂಟಿ: ಬಿಜೆಪಿ

Sampriya
ಗುರುವಾರ, 14 ನವೆಂಬರ್ 2024 (16:57 IST)
ಬೆಂಗಳೂರು: ಭ್ರಷ್ಟರ ಪಕ್ಷ ಕಾಂಗ್ರೆಸ್‌ನಲ್ಲಿ ಜೈಲಿಗೆ ಹೋಗಿ ಬೇಲ್‌ ಮೇಲೆ ಬಂದವರಿಗೆ ರಾಜಾತಿಥ್ಯ ಗ್ಯಾರಂಟಿ. ಜೈಲಿಗೆ ಹೋಗಿ ಬಂದಮೇಲೆಯೇ ಡಿಕೆ ಶಿವಕುಮಾರ್‌  ಅವರಿಗೆ ಕಾಂಗ್ರೆಸ್‌ ರಾಜ್ಯಾಧ್ಯಕ್ಷಗಿರಿ, ಡಿಸಿಎಂ ಪಟ್ಟ ಸಿಕ್ಕಿದ್ದು ಎಂದು ಬಿಜೆಪಿ ಕಾಲೆಳೆದಿದೆ.

ವಾಲ್ಮೀಕಿ ನಿಗಮ ಹಗರಣ ಪ್ರಕರಣದಲ್ಲಿ  ಜೈಲಿಗೆ ಹೋಗಿ ಬಂದ ಶಾಸಕ ಬಿ ನಾಗೇಂದ್ರ ಸಚಿವ ಸ್ಥಾನ ನೀಡುವ ಸುಳಿವನ್ನು ಸಿಎಂ ಸಿದ್ದರಾಮಯ್ಯ ನೀಡುತ್ತಿದ್ದ ಹಾಗೇ ಕಾಂಗ್ರೆಸ್ ಪಕ್ಷವನ್ನು ವ್ಯಂಗ್ಯ ಮಾಡಿ ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದೆ.

ಪೋಸ್ಟ್‌ನಲ್ಲಿ ಹೀಗಿದೆ: ಭ್ರಷ್ಟರಿಗೆ ರೋಲ್‌ ಮಾಡೆಲ್‌ ಆಗಿರುವ A1 IPC 420 ಸಿದ್ದರಾಮಯ್ಯ ಅವರು ವಾಲ್ಮೀಕಿ ನಿಗಮದಲ್ಲಿ ಕೋಟಿ ಕೋಟಿ ಲೂಟಿ ಹೊಡೆದು ಜೈಲಿಗೆ ಹೋಗಿ ಬೇಲ್‌ ಮೇಲೆ ಹೊರ ಬಂದಿರುವ ಭ್ರಷ್ಟ ನಾಗೇಂದ್ರಗೆ ಮತ್ತೆ ಮಂತ್ರಿ ಗಿರಿ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಭ್ರಷ್ಟರ ಪಕ್ಷ ಕಾಂಗ್ರೆಸ್‌ನಲ್ಲಿ ಜೈಲಿಗೆ ಹೋಗಿ ಬೇಲ್‌ ಮೇಲೆ ಬಂದವರಿಗೆ ರಾಜಾತಿಥ್ಯ ಗ್ಯಾರಂಟಿ. ಜೈಲಿಗೆ ಹೋಗಿ ಬಂದಮೇಲೆಯೇ ಡಿಕೆ ಶಿವಕುಮಾರ್‌
 ಅವರಿಗೆ ಕಾಂಗ್ರೆಸ್‌ ರಾಜ್ಯಾಧ್ಯಕ್ಷಗಿರಿ, ಡಿಸಿಎಂ ಪಟ್ಟ ಸಿಕ್ಕಿದೆ.

ದೇಶವನ್ನು ಲೂಟಿ ಮಾಡುವುದಕ್ಕೆ ಕಾಂಗ್ರೆಸ್‌ಗೆ ಭ್ರಷ್ಟಾಸುರರೇ ಬೇಕು. ನಾಗೇಂದ್ರ ಅವರು ಮತ್ತೆ ಸಚಿವರಾದರೆ, ವಾಲ್ಮೀಕಿ ನಿಗಮವೇ ಇಲ್ಲದಂತೆ ನಾಪತ್ತೆ ಆಗುವುದು ಗ್ಯಾರಂಟಿ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments