Webdunia - Bharat's app for daily news and videos

Install App

ಯಾವುದೇ ಕಾರಣಕ್ಕೂ ಗ್ಯಾರಂಟಿ ನಿಲ್ಲುವುದಿಲ್ಲ: ಬಿಜೆಪಿ ಸುಳ್ಳಿನ ಕಾರ್ಖಾನೆ ಎಂದ ಸಿಎಂ ಸಿದ್ದರಾಮಯ್ಯ

Sampriya
ಶನಿವಾರ, 6 ಏಪ್ರಿಲ್ 2024 (18:55 IST)
Photo Courtesy Facebook
ಕೋಲಾರ: ಯಾವುದೇ ಕಾರಣಕ್ಕೂ ನಮ್ಮ ಗ್ಯಾರಂಟಿಗಳು ನಿಲ್ಲುವುದಿಲ್ಲ. ಕಾಂಗ್ರೆಸ್ ಗ್ಯಾರಂಟಿಗಳಿಗೆ ಐದು ವರ್ಷಗಳ ವಾರಂಟಿ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕುರುಡುಮಲೆ ವಿನಾಯಕನ ದೇವಸ್ಥಾನದಲ್ಲಿ ಶನಿವಾರ ವಿಶೇಷ ಪೂಜೆ ಸಲ್ಲಿಸಿ ಲೋಕಸಭೆ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ ಬಳಿಕ ರೋಡ್ ಶೋನಲ್ಲಿ ಮಾತನಾಡಿದರು.

ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುತ್ತದೆ ಎಂದು ಬಿಜೆಪಿ ಹೇಳುತ್ತಿದೆ. ಬಿಜೆಪಿಯವರು ಮೊದಲಿಗೆ ಗ್ಯಾರಂಟಿ ಜಾರಿ ಸಾಧ್ಯವೇ ಇಲ್ಲ, ರಾಜ್ಯ ದಿವಾಳಿ ಆಗಲಿದೆ ಎನ್ನುವ ಸುಳ್ಳು ಸೃಷ್ಟಿಸಿದರು. ಜಾರಿ ಮಾಡಿದ ಬಳಿಕ ಹೊಸ ಸುಳ್ಳು ಸೃಷ್ಟಿಸಿ ಲೋಕಸಭೆ ಚುನಾವಣೆ ಬಳಿಕ ಗ್ಯಾರಂಟಿ ಯೋಜನೆಗಳು ನಿಂತು ಹೋಗುತ್ತವೆ ಎನ್ನುತ್ತಿದ್ದಾರೆ ಎಂದು ತಿರುಗೇಟು ನೀಡಿದರು.

ಬಿಜೆಪಿ ಸೋಲುವ ಭೀತಿಯಿಂದ ಸುಳ್ಳು ಹೇಳಿಕೆಗಳನ್ನು ನೀಡುತ್ತಿದೆ. ನೀವು ಅದಕ್ಕೆ ತಲೆ ಕೆಡಿಸಿಕೊಳ್ಳಬೇಡಿ. ಬಿಜೆಪಿ ಸುಳ್ಳಿನ ಕಾರ್ಖಾನೆ. ನಾವು ಕೊಟ್ಟ ಮಾತಿನಂತೆ ನಡೆದುಕೊಂಡು ನೀವು ನೀಡಿದ ಮತಕ್ಕೆ ಘನತೆ ತಂದಿದ್ದೇವೆ. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ, ನೀವು ಕೊಟ್ಟ ಮತಕ್ಕೆ  ಮೌಲ್ಯ ತಂದು ಕೊಡುವ ರೀತಿಯಲ್ಲಿ ಸರ್ಕಾರ ಕೆಲಸ ಮಾಡುತ್ತದೆ ಎಂದು ಭರವಸೆ ನೀಡಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಧರ್ಮಸ್ಥಳದಲ್ಲಿ ಇಂದು ಯಾವ ಪಾಯಿಂಟ್ ನಲ್ಲಿ ಎಸ್ಐಟಿ ಶೋಧ ನಡೆಸಲಿದೆ

ಡೊನಾಲ್ಡ್ ಟ್ರಂಪ್ ದುಬಾರಿ ಸುಂಕ ಇಂದಿನಿಂದ ಜಾರಿಗೆ: ಭಾರತದ ಯಾವ ಉದ್ಯಮಗಳಿಗೆ ಹೊಡೆತ

ಮತಗಳವಿನ ಬಗ್ಗೆ ಆಘಾತಕಾರಿ ವರದಿಗಳು ಬಹಿರಂಗಗೊಳ್ಳಲಿವೆ: ಕೆ ಸಿ ವೇಣುಗೋಪಾಲ್

ಮುಂದಿನ ಸುದ್ದಿ
Show comments