Webdunia - Bharat's app for daily news and videos

Install App

ಬಂದೂಕು ಹಿಡಿದು ಹೆದರಿಸುತ್ತಿದ್ದಾರೆ: ಈಶ್ವರ್ ಖಂಡ್ರೆ ಕಿಡಿ

Webdunia
ಗುರುವಾರ, 19 ಆಗಸ್ಟ್ 2021 (14:51 IST)
ಈ ಹಿಂದೆ ಬಡಿಗೆ ಹಿಡಿದುಕೊಂಡು ತಿರುಗಾಡ್ತಾ ಇದ್ದೋರು
ಇದೀಗ ಬಂದೂಕಿನಿಂದ ಜನರನ್ನ ಹೆದರಿಸಲು ಹೊರಟಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಬಿಜೆಪಿ ವಿರುಧ್ದ ಹರಿಹಾಯ್ದಿದ್ದಾರೆ
ಕಲಬುಗರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮದು ಶ್ರೀಮಂತ ಇತಿಹಾಸದ ರಾಜ್ಯ ಆದರೆ ಹೀಗೆ ಬಂದೂಕು ಹಿಡಿದು ಮೆರವಣಿಗೆ ಮಾಡಿಕೊಳ್ಳೋದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ಕೋವಿಡ್ ನಿಂದಾಗಿ ಸಾವಿರಾರು ಸಂಖ್ಯೆಯಲ್ಲಿ ಜನ ಸಾವನ್ನಪ್ಪಿದ್ದಾರೆ ಸಹಸ್ರಾರು ಕುಟುಂಬಗಳು ಬೀದಿಗೆ ಬಿದ್ದಿವೆ. ಇಂಥದ್ರಲ್ಲಿ ಜನಾಶೀರ್ವಾದ ಯಾತ್ರೆ ನೆಪದಲ್ಲಿ ಇಂಥ ಸ್ವಾಗತ ಸಂಭ್ರಮಗಳು ಬೇಕೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಅವರನ್ನು ಪ್ರಶ್ನಿಸಿದರು.
ಯಾದಗಿರಿಯಲ್ಲಿ ನಡೆದ ಬಂದುಕಿನ ಫಾಯರಿಂಗ್ ನಲ್ಲಿ ಯ್ಯಾರಿಗಾದ್ರು ಗುಂಡು ತಗುಲಿದ್ರೆ ಯ್ಯಾರು ಜವಾಬ್ದಾರರಾಗ್ತಾ ಇದ್ದರು? ಅಂಥ ಯಾತ್ರೆಯಲ್ಲಿ ಬಂದೂಕನ್ನ ತರಲು ಪರವಾನಿಗೆ ನೀಡಿದ್ದಾದರೂ ಯಾರು? ಆ ಬಂದೂಕುಗಳಿಗೆ ಪರವಾನಿಗೆ ಇದೆಯಾ ಎಂದು ಖಂಡ್ರ ಪ್ರಶ್ನಿಸಿದರು.
ಇದೆಲ್ಲವನ್ನ ನೋಡಿದ್ರೆ ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ಸತ್ತುಹೋಗಿದೆ ಅನಿಸ್ತದೆ ಕೂಡಲೆ ಪ್ರಕರಣದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಈಶ್ವರ್ ಖಂಡ್ರೆ ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

79ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿರುವ ದೇಶಕ್ಕೆ ಬಾರೀ ಭದ್ರತೆ

ಮಹಾರಾಷ್ಟ್ರ ಭೀಕರ ಅಪಘಾತ: ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 7ಮಂದಿ

ಎಐ ತಂತ್ರವಲ್ಲ, ಮೆಟ್ರೋ ಹಳದಿ ಮಾರ್ಗದಲ್ಲೂ ಕೇಳಿಬರುತ್ತಿದೆ ಅಪರ್ಣಾ ಧ್ವನಿ, ಹೇಗೆ ಗೊತ್ತಾ

ಕಾಂಗ್ರೆಸ್‌ನಲ್ಲಿ ಸತ್ಯವಂತರಿಗೆ ಕಾಲವಲ್ಲ: ಶೋಭಾ ಕರಂದ್ಲಾಜೆ

ಕೆಎನ್‌ ರಾಜಣ್ಣ ರಾಜೀನಾಮೆ: ಸಂಚಲನ ಸೃಷ್ಟಿಸುತ್ತಿದೆ ಡಿಕೆಶಿ ಆಪ್ತನ ಹೇಳಿಕೆ

ಮುಂದಿನ ಸುದ್ದಿ
Show comments