Webdunia - Bharat's app for daily news and videos

Install App

ಕ್ಷುಲಕ ಕಾರಣಕ್ಕೆ ಫೈರಿಂಗ್

Webdunia
ಶನಿವಾರ, 16 ಅಕ್ಟೋಬರ್ 2021 (15:11 IST)
ಆಡಿ (Audi) ಕಾರ್ ಮತ್ತು ಬೈಕ್ ಸವಾರನ ನಡುವೆ ನಡೆದ ಮಾತಿನ ಚಕಮಕಿ ತಾರಕಕ್ಕೇರಿ ಗುಂಡು ಹಾರಿಸಿರುವ ಪ್ರಸಂಗ ಬೆಂಗಳೂರಿನ ಯಶವಂತಪುರದಲ್ಲಿ ನಡೆದಿದೆ. ಬೈಕ್ ಸವಾರ ಯಶವಂತಪುರ ಮಾರ್ಗವಾಗಿ ಚಲಿಸುತ್ತಿದ್ದ. ಈ ವೇಳೆ ಎದುರಿನಿಂದ ಬಂದ ಅಡಿ ಕಾರ್‌ನಲ್ಲಿದ್ದ ವ್ಯಕ್ತಿ ಬೈಕ್ ಸವಾರ ಅನಿಲ್‌ನನ್ನು ಕೈನಿಂದ ದೂರ ತಳ್ಳಿದ್ದ. ಇದರಿಂದ ಕುಪಿತಗೊಂಡಿದ್ದ ಅನಿಲ್ ಬೈಕ್ ನಿಲ್ಲಿಸಿ ಅಡಿ ಕಾರ್‌ಗೆ ಅಡ್ಡ ಹಾಕಿ ಪ್ರಶ್ನಿಸಿದ್ದ. ಕಾರ್‌ನಿಂದ ಹೊರಗೆ ಬಾ ಎಂದು ಅಡಿ ಕಾರ್‌ನಲ್ಲಿದ್ದ ವ್ಯಕ್ತಿಯನ್ನು ಹೊರಗೆ ಎಳೆಯಲು ಬೈಕ್ ಸವಾರ ಯತ್ನಿಸಿದ್ದ. ಈ ವೇಳೆ ಕಾರಿನಲ್ಲಿದ್ದ ಚಾಲಕ ಎರಡು ಸುತ್ತು ಗುಂಡು ಹಾರಿಸಿದ್ದಾನೆ. ಇದರಿಂದ ಜನರು ಗಾಬರಿಯಾಗಿ ಸ್ಥಳಕ್ಕೆ ಆಗಮಿಸುವ ವೇಳೆಗೆ ಆಡಿ ಕಾರ್ ಎಸ್ಕೇಪ್ ಆಗಿದೆ. ಈ ಕುರಿತು ಯಶವಂತಪುರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments