Select Your Language

Notifications

webdunia
webdunia
webdunia
webdunia

'ಕೈ' ಶಾಸಕರ ಬೆಂಬಲಿಗರಿಂದ ಗೂಂಡಾಗಿರಿ!

'ಕೈ' ಶಾಸಕರ ಬೆಂಬಲಿಗರಿಂದ ಗೂಂಡಾಗಿರಿ!
ಬೆಂಗಳೂರು , ಗುರುವಾರ, 22 ಫೆಬ್ರವರಿ 2018 (10:35 IST)
ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೆ ಕಾಂಗ್ರೆಸ್ ಪಡೆಯ ಗೂಂಡಾಗಿರಿ ನಡೆದಿದೆ. ಕಾಂಗ್ರೆಸ್ ಸಮಾವೇಶಕ್ಕೆ ಜಾಗ ಕೊಡಲಿಲ್ಲ ಎಂಬ ಕಾರಣಕ್ಕೆ  ಶಾಸಕ ಎಸ್ .ಟಿ.ಸೋಮಶೇಖರ್ ಬೆಂಬಲಿಗರಿಂದ ಅಟ್ಟಹಾಸ ನಡೆದಿದೆ. ನಡುರಾತ್ರಿ ಕೆಲಸಗಾರರ ಮೇಲೆ ಸೇಡು ತೀರಿಸಿಕೊಂಡಿದ್ದಾರೆ ಪಾಪಿಗಳು. ಕೆಲಸಗಾರರ ಮೇಲೆ ಲಾಂಗು, ಮಚ್ಚು, ದೊಣ್ಣೆ, ಕಲ್ಲುಗಳಿಂದ ಹೊಡೆದ ಪುಡಾರಿಗಳು.



ಇದೇ ತಿಂಗಳ 18ರಂದು ತಿಗಳರಪಾಳ್ಯದಲ್ಲಿ ಮನೆ-ಮನೆಗೆ ಕಾಂಗ್ರೆಸ್ ಸಮಾವೇಶ ಆಯೋಜನೆಗೊಂಡಿತ್ತು. ಖಾಲಿ ಜಾಗಕ್ಕೆ ಕಾಂಪೌಂಡ್ ಹಾಕಿದ್ದರಿಂದ ಜಾಗ ಕೊಡುವುದಕ್ಕೆ ನಿರಾಕರಿಸಿದ ಹಿನ್ನೆಲೆ ಕಾಂಪೌಂಡ್ ಕೆಡವಿ ಶಾಸಕರ ಬೆಂಬಲಿಗರು ಗೂಂಡಾಗಿರಿ ಮಾಡಿದ್ದಾರೆ. ಅದು ಅಲ್ಲದೆ, ಖಾಲಿ ಜಾಗದಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರ ಮೇಲೆ ಹಲ್ಲೆ ಕೂಡ ಮಾಡಲಾಗಿದೆ. ಪ್ರಕಾಶ್, ಚಿಕ್ಕಣ್ಣ, ಮಹೇಶ್, ಜೋಗಣ್ಣಗೌಡ ಮೇಲೆ ಹಲ್ಲೆ ಮಾಡಲಾಗಿದೆ.ಕೈಗೆ ಸಿಕ್ಕ ಪ್ರಕಾಶ ನನ್ನು ಅಟ್ಟಾಡಿಸಿ ಹೊಡೆದಿದ್ದಾರೆ ಗೂಂಡಾಗಳು. ಹಲ್ಲೆಗೊಳಗಾದ ಪ್ರಕಾಶ್ ಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಪರಪ್ಪನ ಅಗ್ರಹಾರ ಜೈಲಿನಲ್ಲೂ ಮೊಹಮ್ಮದ್ ನಲಪಾಡ್ ಕಿತ್ತಾಟ!