ಪೆನ್ನು ಕದ್ದ ತಪ್ಪಿಗೆ ಬಾಲಕನಿಗೆ ಇದೆಂಥಾ ದೊಡ್ಡ ಶಿಕ್ಷೆ ಕೊಟ್ಟು ಬಿಟ್ಟ ಆ ಗುರೂಜಿ

Krishnaveni K
ಶನಿವಾರ, 3 ಆಗಸ್ಟ್ 2024 (13:22 IST)
ರಾಯಚೂರು: ಶಾಲೆಗೆ ಹೋಗುವ ವಯಸ್ಸಿನ ಚಿಕ್ಕಮಕ್ಕಳು ತಮಗೆ ಗೊತ್ತಿದ್ದೋ, ಗೊತ್ತಿಲ್ಲದೆಯೂ ಯಾವುದೋ ವಸ್ತುವಿಗೆ ಆಸೆಪಟ್ಟು ಕಳ್ಳತನ ಮಾಡಿಬಿಡುತ್ತಾರೆ. ಇದನ್ನು ಚಿಕ್ಕಂದಿನಿಂದಲೇ ತಿದ್ದಬೇಕು ಎನ್ನುವುದು ನಿಜ. ಆದರೆ ಅಂತಹ ಒಂದು ತಪ್ಪಿಗೆ ಇಲ್ಲೊಬ್ಬ ಗುರೂಜಿ ಪುಟ್ಟ ಬಾಲಕನಿಗೆ ಮನಸೋ ಇಚ್ಛೆ ದಂಡಿಸಿದ್ದಾನೆ.

ರಾಯಚೂರಿನ ರಾಮಕೃಷ್ಣ ಆಶ್ರಮದಲ್ಲಿ ಈ ಘಟನೆ ನಡೆದಿದೆ. ಶ್ರವಣ ಕುಮಾರ ಎಂಬ ಪುಟ್ಟ ಬಾಲಕ ಸಹಪಾಠಿಯ ಪೆನ್ನು ಕದ್ದಿದ್ದ. ಈ ವಿಚಾರ ತಿಳಿದ ಸಹಪಾಠಿ ಗುರೂಜಿಗೆ ದೂರು ನೀಡಿದ್ದ. ಹೀಗಾಗಿ ಬಾಲಕನನ್ನು ಕರೆಸಿಕೊಂಡ ಗುರೂಜಿ ಆತನಿಗೆ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ.

ಅಷ್ಟಕ್ಕೇ ಸುಮ್ಮನಾಗದೇ ಆತನನ್ನು ಎರಡು ದಿನಗಳ ಕಾಲ ಕತ್ತಲ ಕೋಣೆಯಲ್ಲಿ ಕೂಡಿ ಹಾಕಿದ್ದಾನೆ. ಬಾಲಕನ ತಾಯಿ ಆಶ್ರಮಕ್ಕೆ ಬಂದಾಗ ಮಗನ ಅವಸ್ಥೆ ನೋಡಿ ಗಾಬರಿಯಾಗಿದೆ. ಎರಡು ದಿನಗಳ ಕಾಲ ಹಲ್ಲೆ, ಕತ್ತಲೆ ಕೋಣೆಯಲ್ಲಿ ಕೂಡಿ ಹಾಕಿದ ಪರಿಣಾಮ ಬಾಲಕ ತೀವ್ರ ಅಸ್ವಸ್ಥನಾಗಿದ್ದ.

ಕಣ್ಣುಗಳು ಬಾತುಕೊಂಡು ಮೈ-ಕೈಯಲ್ಲೆಲ್ಲಾ ಹೊಡೆದ ಗುರುತುಗಳಿತ್ತು. ಬಳಿಕ ಆತನನ್ನು ಅಲ್ಲಿಂದ ಕರೆದುಕೊಂಡು ಬಂದ ತಾಯಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಮಗನ ಸ್ಥಿತಿ ಕಂಡು ಆಕ್ರೋಶಗೊಂಡ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments