Webdunia - Bharat's app for daily news and videos

Install App

ವೇತನ ಹೆಚ್ಚಳಕ್ಕೆ ಹಣ ಬಿಡುಗಡೆ ಮಾಡಿದ್ರು ವೇತನ ಹೆಚ್ಚಳ ಮಾಡದ ಜಿವಿಕೆ ಕಂಪನಿ

Webdunia
ಶುಕ್ರವಾರ, 4 ನವೆಂಬರ್ 2022 (13:21 IST)
ದೇವರು ವರ ಕೊಟ್ಟರು ಪೂಜಾರಿ ವರ ಕೊಡ್ತಿಲ್ಲ ಅನ್ನುವಾಗೆ ರಾಜ್ಯ ಸರ್ಕಾರದ ಮಾತಿಗೆ ಜಿವಿಕೆ ಕವಡೆ ಕಾಸಿನ ಕಿಮ್ಮತ್ತು ಕೊಡುತ್ತಿಲ್ಲ.ವೇತನ ಹೆಚ್ಚಳಕ್ಕೆ ಹಣ ಬಿಡುಗಡೆ ಮಾಡಿದ್ರು ವೇತನವನ್ನ ಜಿವಿಕೆ ಕಂಪನಿ ಹೆಚ್ಚಳ ಮಾಡಿಲ್ಲ.ಮತ್ತೊಮ್ಮೆ ರಾಜ್ಯಾದ್ಯಂತ  108 ಸಿಬ್ಬಂದಿಗಳು ಹೋರಾಟ ಮಾಡುವ ಎಚ್ಚರಿಕೆ ನೀಡಿದಾರೆ.
 
ಜಿವಿಕೆ ಕಂಪನಿಯನ್ನು ಕೂಡಲೇ ವಜಾ ಮಾಡುವಂತೆ ಒತ್ತಾಯ ಮಾಡಿದ್ದು,ಜಿವಿಕೆ ಕಂಪನಿಯು 108 ಸಿಬ್ಬಂದಿಗಳಿಗೆ ಎರಡು ತಿಂಗಳು ಸಂಬಳ ಬಿಡುಗಡೆ ಮಾಡಿರಲಿಲ್ಲ.ಅ ಸಂಧರ್ಭದಲ್ಲಿ ನೌಕರರು ಸಾಮೂಹಿಕ ರಜೆ ಹಾಕ್ತಿವಿ
ಎಂದು ಎಚ್ಚರಿಕೆ ನೀಡಿದ್ವಿ .ಅಂದು ಆರೋಗ್ಯ ಸಚಿವರು 
ಮಧ್ಯಪ್ರವೇಶ ‌ಮಾಡಿ ವೇತನದಲ್ಲಿ ಆಗಿರುವ ತಾರತಮ್ಯ ಸರಿಪಡಿಸುವಂತೆ ಆಯುಕ್ತರಿಗೆ ಸೂಚನೆ ನೀಡಿದ್ರು.ಈ ಹಿನ್ನಲೆಯಲ್ಲಿ ಆಯುಕ್ತರು ಕಳೆದ ಏಳನೇ ತಾರೀಖು ಜಿವಿಕೆ ಕಂಪನಿ ಮತ್ತು ನೌಕರರ ಜೊತೆಗೆ ಸಭೆ ನಡೆಸಿದರು. ಸುಮಾರು ವರ್ಷಗಳಿಂದ ಜಿವಿಕೆ ಕಂಪನಿ ಸಿಬ್ಬಂದಿಗಳಿಗೆ ವೇತನ ಹೆಚ್ಚಳ ಮಾಡಿರಲಿಲ್ಲ ಹಾಗಾಗಿ 45% ರಷ್ಟು ವೇತನ ಹೆಚ್ಚಳ ಮಾಡಲು ಸಭೆಯಲ್ಲಿ ತೀರ್ಮಾನ ಮಾಡಲಾಗಿತ್ತು.ಅದಕ್ಕಾಗಿ ರಾಜ್ಯ ಸರ್ಕಾರ 31 ಕೋಟಿ ರೂಪಾಯಿ ಹಣವನ್ನು ಬಿಡುಗಡೆ ಮಾಡಿದ್ರು.
 
ಆದರೆ ಈಗ ಜಿವಿಕೆ ಕಂಪನಿಯು ಸರ್ಕಾರ ಹೇಳಿದಂತೆ ವೇತನ ಹೆಚ್ಚಳ ಮಾಡಲು ಬರುವುದಿಲ್ಲ.‌ಹೈದ್ರಾಬಾದ್ ಹೆಡ್ ಆಫೀಸ್ ನಿಂದ ನಮಗೆ ವೇತನ ಹೆಚ್ಚಳ ಮಾಡಲು ಅನುಮತಿ ಸಿಕ್ಕಿಲ್ಲ ಎನ್ನುತ್ತಿದೆ.ಕೂಡಲೇ ರಾಜ್ಯ ಸರ್ಕಾರ ಇಂತಹ ನೀಚ ಕಂಪನಿ ಮೇಲೆ ಕ್ರಮ ಕೈಗೊಳ್ಳಬೇಕು.ಸರ್ಕಾರ ಸೂಚನೆ ನೀಡಿದಂತೆ ವೇತನ ಹೆಚ್ಚಳ ಮಾಡಿಲ್ಲ ಅಂದರೆ  108 ಸಿಬ್ಬಂದಿಗಳು ರಾಜ್ಯಾದ್ಯಂತ ಹೋರಾಟ ಮಾಡಬೇಕಾಗುತ್ತದೆ.ನಾವು ರಾಜ್ಯ ಸರ್ಕಾರದ ವಿರುದ್ಧ ಇಲ್ಲ, ಹಾಗಾಗಿ ಆರೋಗ್ಯ ಸಚಿವರು ಆರೋಗ್ಯ ಇಲಾಖೆಯ ಆಯುಕ್ತರು ಕೂಡಲೇ ಈ ಕಂಪನಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡ್ತಿವಿ.ಹದಿಮೂರು ವರ್ಷಗಳಿಂದ ನಿರಂತರವಾಗಿ ಸಿಬ್ಬಂದಿಗಳ ಮೇಲೆ ಜಿವಿಕೆ ದಬ್ಬಾಳಿಕೆ ಮಾಡಿಕೊಂಡು ಬಂದಿದೆ.ಎಲ್ಲದಕ್ಕೂ ಹೈದ್ರಾಬಾದ್ ಹೆಡ್ ಆಫೀಸ್ ನಿಂದ ಅನುಮತಿ ಬೇಕು ಅಂದರೆ ಸಂಬಳ ಹೆಚ್ಚಳ ಮಾಡಲು ಕರ್ನಾಟಕ ಸರ್ಕಾರ ಹಣ ಬಿಡುಗಡೆ ಮಾಡಿರುವುದು.ಕೂಡಲೇ ರಾಜ್ಯ ಸರ್ಕಾರ ಈ ಕಂಪನಿಯನ್ನು ವಜಾ ಮಾಡಲಿ 108 ಸಿಬ್ಬಂದಿಗಳು ಮೂರು ತಿಂಗಳು ಉಚಿತವಾಗಿ ಸೇವೆ ನೀಡಲು ತಯಾರಿದ್ದೇವೆ ಎಂದು 108 ನೌಕರರ ಸಂಘದ ಉಪಾಧ್ಯಕ್ಷ ಎನ್ ಹೆಚ್ ಪರಮಶಿವ  ಆಕ್ರೋಶ ಹೊರಹಾಕಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

Karnataka Weather: ಬೆಂಗಳೂರಿಗೆ ಇನ್ನೆಷ್ಟು ದಿನ ಮಳೆ, ಯಾವ ಜಿಲ್ಲೆಗೆ ಏನು ಅಲರ್ಟ್ ಇಲ್ಲಿದೆ ವಿವರ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಮುಂದಿನ ಸುದ್ದಿ
Show comments