Webdunia - Bharat's app for daily news and videos

Install App

ಜಿಮ್ ತರಬೇತುದಾರನಿಂದ ಮಹಿಳಾ ಟೆಕ್ಕಿಯ ಕೊಲೆ; ಕೊಲೆಗೆ ಕಾರಣವೇನು ಗೊತ್ತಾ?

Webdunia
ಗುರುವಾರ, 30 ಆಗಸ್ಟ್ 2018 (11:40 IST)
ಬೆಂಗಳೂರು: ದೆಹಲಿ ಮೂಲದ ಮಹಿಳಾ ಟೆಕ್ಕಿ  ವಿಜಯಲಕ್ಷ್ಮಿ (23) ಅವರನ್ನು ಕೊಲೆ ಮಾಡಿ ಪರಾರಿ ಆಗಿದ್ದ ಹರೀಶ್‌ ಅನ್ನು  ಪೊಲೀಸರು ದೆಹಲಿಯಲ್ಲಿ ಬಂಧಿಸಿದ್ದಾರೆ.


ದೆಹಲಿ ಮೂಲದವರೇ ಆಗಿದ್ದ ವಿಜಯಲಕ್ಷ್ಮಿ ಮೂರು ತಿಂಗಳ ಹಿಂದೆ ಬೆಂಗಳೂರಿನಲ್ಲಿರುವ ಪ್ರತಿಷ್ಠಿತ ಸಾಫ್ಟ್‌ವೇರ್‌ ಕಂಪನಿಯಲ್ಲಿ ಕೆಲಸಕ್ಕೆ ಸೇರಿದ್ದರು.ದೆಹಲಿಯಲ್ಲೆ  ಪರಿಚಯವಾಗಿದ್ದ ಗೆಳೆಯ ಹರೀಶ್‌ಕುಮಾರ್‌ ಆ. 15 ರಂದು ಗೆಳತಿಯನ್ನು ಮಾತಾಡಿಸುವ ನೆಪದಲ್ಲಿ ಬೆಂಗಳೂರಿಗೆ ಬಂದು ಕೊಲೆ ಮಾಡಿ ಪರಾರಿ ಆಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.


ವಿಜಯಲಕ್ಷ್ಮಿ ದೆಹಲಿಯಲ್ಲಿದ್ದಾಗಲೇ  ಜಿಮ್‌ ತರಬೇತುದಾರನಾಗಿದ್ದ ಹರೀಶ್‌ನ ಪರಿಚಯ ಆಗಿತ್ತು. ಅವರಿಬ್ಬರ ಪರಿಚಯ ಸ್ನೇಹಕ್ಕೆ ತಿರುಗಿತ್ತು. ಹರೀಶ್ ಆ ಸ್ನೇಹವನ್ನು ಪ್ರೀತಿ ಎಂದು ನಂಬಿಕೊಂಡಿದ್ದ. ಹೀಗಾಗಿ ಮದುವೆಯಾಗು ಎಂದು ಆಕೆಯನ್ನು ಪೀಡಿಸುತ್ತಿದ್ದ. ವಿಜಯಲಕ್ಷ್ಮಿ ದೆಹಲಿಯಿಂದ ಬೆಂಗಳೂರಿಗೆ ವರ್ಗವಾಗಿದ್ದು ಹರೀಶ್‌ಗೆ ಇಷ್ಟ ಇರಲಿಲ್ಲ. ತನ್ನನ್ನು ವಿಜಯಲಕ್ಷ್ಮಿ ನಿರ್ಲಕ್ಷಿಸುತ್ತಿದ್ದಾರೆ ಎಂದು ಸಿಟ್ಟುಗೊಂಡಿದ್ದ. ಅದು ಅಲ್ಲದೇ ವಿಜಯಲಕ್ಷ್ಮಿಯಿಂದ ಅಗತ್ಯಬಿದ್ದಾಗಲೆಲ್ಲಾ ಸಾಕಷ್ಟು ಹಣ ಪೀಕುತ್ತಿದ್ದ ಹರೀಶ್‌ಗೆ ಈ ಹಣದ ಮೂಲ ಕೂಡ ನಿಂತು ಹೋಗುತ್ತದೆ ಎನ್ನುವ ಭಯ ಕಾಡತೊಡಗಿತ್ತು. ಇದೇ ಕಾರಣಕ್ಕೆ ಕೊಲೆ ಮಾಡಿರುವ ಸಾಧ್ಯತೆಗಳಿವೆ ಎಂದು ವೈಟ್‌ಫೀಲ್ಡ್‌ ಪೊಲೀಸರು ತಿಳಿಸಿದ್ದಾರೆ.

 
ಆ.16 ರಂದು ಬೆಂಗಳೂರಿನ ನಾಗೊಂಡನಹಳ್ಳಿಯ ಬಾಡಿಗೆ ಮನೆಯಲ್ಲಿ ಕೊಲೆ ಮಾಡಿ ಆರೋಪಿ ದಿಲ್ಲಿಯಲ್ಲಿ ತಲೆಮರೆಸಿಕೊಂಡಿದ್ದ. ಆ. 15 ರಂದು ಗೆಳತಿಯನ್ನು ಮಾತಾಡಿಸುವ ನೆಪದಲ್ಲಿ ಬೆಂಗಳೂರಿಗೆ ಬಂದು ಕೊಲೆ ಮಾಡಿ ಪರಾರಿ ಆಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಚ್ಚುತ್ತಿರುವ ಪ್ರಕರಣಗಳ ಮಧ್ಯೆ ಜಯದೇವ್‌ಗೆ ರೋಗಿಗಳ ಸಂಖ್ಯೆ ಹೆಚ್ಚಳ: ಹೆಚ್ಚುವರಿ ತಜ್ಞ ವೈದ್ಯರ ನಿಯೋಜನೆ

ವೈಜ್ಞಾನಿಕ ಸಾಧನೆಯನ್ನು ಅಪಮಾನಿಸುವ ಮುಖ್ಯಮಂತ್ರಿ ಕ್ಷಮೆ ಕೇಳಲಿ: ಪ್ರಲ್ಹಾದ್ ಜೋಶಿ

ಪ್ರವೀಣ್ ನೆಟ್ಟಾರು ಪ್ರಕರಣ: ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ

ಹಿಮಾಚಲ ಪ್ರದೇಶದಲ್ಲಿ ವರುಣನ ಅಬ್ಬರಕ್ಕೆ 37 ಸಾವು, 400ಕೋಟಿ ನಷ್ಟ

ವಿಮಾನದಲ್ಲಿ ಸಹಪ್ರಯಾಣಿಕನ ಮೂತಿಗೆ ಗುದ್ದಿದ ವ್ಯಕ್ತಿ: ಭಾರತ ಮೂಲದ ಪ್ರಯಾಣಿಕ ಅರೆಸ್ಟ್‌

ಮುಂದಿನ ಸುದ್ದಿ
Show comments