ಸಿಎಂ ಪುತ್ರನ ಪರ ಸಚಿವ ಎಚ್‌‍.ಸಿ.ಮಹಾದೇವಪ್ಪ ಬ್ಯಾಟಿಂಗ್

Webdunia
ಗುರುವಾರ, 12 ಅಕ್ಟೋಬರ್ 2017 (13:06 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಯಾವುದೇ ಭೂ ಅಕ್ರಮದಲ್ಲಿ ಭಾಗಿಯಾಗಿಲ್ಲ ಎಂದು ಸಚಿವ ಎಚ್.ಸಿ, ಮಹಾದೇವಪ್ಪ ಯತೀಂದ್ರ ಪರ ಬ್ಯಾಟಿಂಗ್ ನಡೆಸಿದ್ದಾರೆ.
ಬಿಜೆಪಿ ಮುಖಂಡ ಬಿ.ಜಿ.ಪುಟ್ಟಸ್ವಾಮಿ ಮಾಡಿರುವ ಆರೋಪದಲ್ಲಿ ಸತ್ಯಾಂಶವಿಲ್ಲ. ಸಮಯ ಸಾಧಕ ರಾಜಕಾರಣಿಗಳಿಗೆ ಜನತೆ ಮುಂಬರುವ ದಿನಗಳಲ್ಲಿ ತಕ್ಕ ಪಾಠ ಕಲಿಸುತ್ತಾರೆ ಎಂದು ತಿರುಗೇಟು ನೀಡಿದ್ದಾರೆ.
 
ಸಿಎಂ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ವೈದ್ಯರಾಗಿದ್ದಾರೆ. ಅವರಿಗೆ ಸಾರ್ವಜನಿಕ ಜೀವನ ಇಷ್ಟವಿರಲಿಲ್ಲ. ಕೆಲ ಕಾರಣಗಳಿಂದ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ ಎಂದು ತಿಳಿಸಿದ್ದಾರೆ. 
 
ಸಿಎಂ ಸಿದ್ದರಾಮಯ್ಯರಾಗಲಿ ಅಥವಾ ಅವರ ಪುತ್ರ ಯತೀಂದ್ರರಾಗಲಿ ಡಿನೋಟಿಫೈ ಪ್ರಕರಣದಲ್ಲಿ ಭಾಗಿಯಾಗಿಲ್ಲ ಇದು ರಾಜಕಾರಣದ ಬೌಧ್ಧಿಕ ಅಧಃಪತನ ಎಂದು ಸಚಿವ ಎಚ್.ಸಿ.ಮಹಾದೇವಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 
 
ಸಿಎಂ ಸಿದ್ದರಾಮಯ್ಯ ಡಿನೋಟಿಫೈ ಮಾಡುವ ಮೂಲಕ 300 ಕೋಟಿ ರೂಪಾಯಿಗಳ ಹಗರಣವೆಸಗಿದ್ದಾರೆ. ಇವರ ಪುತ್ರ ಯತೀಂದ್ರ ಶಾಂತಾ ಇಂಡೃಸ್ಟ್ರೀಸ್‌ಗಾಗಿ ಅಕ್ರಮವಾಗಿ ಭೂಮಿ ಪಡೆದಿದ್ದಾರೆ ಎಂದು ಬಿಜೆಪಿ ಮುಖಂಡ ಬಿ.ಜಿ. ಪುಟ್ಟಸ್ವಾಮಿ ಆರೋಪಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಅಗಲಿದ ಅಮ್ಮನಿಗೆ ಕೊನೆ ಬಾರಿ ಮುತ್ತಿಕ್ಕಿ ಅಂತಿಮ ನಮನ ಸಲ್ಲಿಸಿದ ಎಚ್‌ಡಿ ಕುಮಾರಸ್ವಾಮಿ, Video

ಶಿರೂರು ಕರಾವಳಿ ಬಳಿ ದೋಣಿ ದುರಂತ: ಐವರು ಮೀನುಗಾರರ ರಕ್ಷಣೆ

CJP ಪ್ರತಿಭಟನೆಯಲ್ಲಿ ನೇಪಾಳ ಥರಾ ಮಾಡ್ತೀವಿ, ಪಾರ್ಲಿಮೆಂಟ್ ಭವನವನ್ನೇ ಕಿತ್ತು ಹಾಕ್ತೀವಿ ಎಂದು ಕಿರುಚಾಡಿದ ಯುವಕ Video

ಮುಂದಿನ ಸುದ್ದಿ
Show comments