Webdunia - Bharat's app for daily news and videos

Install App

ಎಚ್.ಡಿ.ರೇವಣ್ಣ ವಿದ್ಯಾವಂತರಂತೆ ಮಾತನಾಡಲಿ: ಎ.ಮಂಜು

Webdunia
ಸೋಮವಾರ, 6 ಜೂನ್ 2016 (18:18 IST)
ಜೆಡಿಎಸ್ ನಾಯಕ ಎಚ್.ಡಿ.ರೇವಣ್ಣ ವಿದ್ಯಾವಂತರಂತೆ ಮಾತನಾಡುವುದನ್ನು ಕಲಿಯಲಿ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜು ಟಾಂಗ್ ನೀಡಿದ್ದಾರೆ.
 
ಪರಿಷತ್ ಚುನಾವಣೆ ಖರ್ಚಿಗಾಗಿ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜು ಅಧಿಕಾರಿಗಳಿಂದ ಹಣ ವಸೂಲಿ ಮಾಡುತ್ತಿದ್ದು, ಅವರನ್ನು ನಗರದ ಐಬಿಗೆ ಕರೆಸಿ ಸಭೆ ನಡೆಸಿದ್ದಾರೆಂದು ಗಂಭೀರವಾಗಿ ಆರೋಪಿಸಿದ್ದರು. 
 
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಎ.ಮಂಜು, ನಾನು ಐಬಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸುವಾಗ ರೇವಣ್ಣನವರು ನನ್ನ ಪಕ್ಕದ ಕೊಣೆಯಲ್ಲೇ ಇರುವುದು ಅವರಿಗೆ ಮರೆತು ಹೋಗಿರಬೇಕು. ಅವರು ಸಹ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ನಾನು ಆರೋಪಿಸಬಹುದಾಗಿತ್ತು ಎಂದು ತಿರುಗೇಟು ನೀಡಿದ್ದಾರೆ.
 
ಜೆಡಿಎಸ್ ಅವಧಿಯಲ್ಲಿ ಚುನಾವಣೆ ಖರ್ಚಿಗೆಂದು ಹಣ ವಸೂಲಿ ಮಾಡಲಾಗುತ್ತಿತ್ತು. ಅದನ್ನು ನನಗೆ ಹೋಲಿಕೆ ಮಾಡಿ ರೇವಣ್ಣವರು ಹೇಳುತ್ತಿದ್ದಾರೆ ಎಂದು ಎ.ಮಂಜು ಟಾಂಗ್ ನೀಡಿದ್ದಾರೆ.
 
ನಗರದಲ್ಲಿರುವ ಐಬಿಗೆ ಅದಿಕಾರಿಗಳನ್ನು ಕರೆದಿದ್ದು ನಿಜ. ಆದರೆ, ಕುಡಿಯುವ ನೀರಿನ ಸಮಸ್ಯೆ ಕುರಿತು ಚರ್ಚೆ ನಡೆಸಲು ಸಭೆ ಕರೆದಿದ್ದೆ. ಇದು ನೀತಿ ಸಂಹಿತೆ ಉಲ್ಲಂಘನೆಯಾಗಲು ಸಾಧ್ಯವೆ ಎಂದು ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments