Publish Date: Sun, 10 Apr 2022 (18:58 IST)
Updated Date: Sun, 10 Apr 2022 (19:05 IST)
ಶ್ರೀರಾಮ ನವಮಿ ಪ್ರಯುಕ್ತ ಇಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬೆಂಗಳೂರಿನ ವಿವಿಧೆಡೆ ನಡೆದ ಶ್ರೀರಾಮ ನವಮಿ ಉತ್ಸವದಲ್ಲಿ ಪಾಲ್ಗೊಂಡಿದ್ದರು. ಕೆಂಗೇರಿ ಮತ್ತು ದಾಸರಹಳ್ಳಿಯಲ್ಲಿ ಶ್ರೀರಾಮನಿಗೆ ವಿಶೇಷ ಪೂಜೆ ಸಲ್ಲಿಸಿದ ಕುಮಾರಸ್ವಾಮಿ, ದೇವಸ್ಥಾನಕ್ಕೆ ಆಗಮಿಸಿದ ಭಕ್ತರಿಗೆ ಪಾನಕ, ಕೋಸಂಬರಿ ವಿತರಣೆ ಮಾಡಿದರು.