Webdunia - Bharat's app for daily news and videos

Install App

ಸಿಎಂ, ಆರೆಸ್ಸೆಸ್, ಬಿಜೆಪಿ ನಡುವೆ ಒಳಒಪ್ಪಂದ: ಎಚ್ ವಿಶ್ವನಾಥ್ ಆರೋಪ

Webdunia
ಶನಿವಾರ, 28 ಅಕ್ಟೋಬರ್ 2017 (13:02 IST)
ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಘಪರಿವಾರ ಮತ್ತು ಬಿಜೆಪಿ ನಡುವೆ ಒಳಒಪ್ಪಂದವಿದೆ ಎಂದು ಜೆಡಿಎಸ್ ಹಿರಿಯ ಮುಖಂಡ, ಮಾಜಿ ಸಂಸದ ಎಚ್.ವಿಶ್ವನಾಥ್ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದು ಮುಸ್ಲಿಂ ಸಮುದಾಯಗಳ ಮಧ್ಯೆ ವಿಷಬೀಜ ಬಿತ್ತುತ್ತಿರುವ ಕಲ್ಲಡ್ಕ ಪ್ರಭಾಕರ್ ವಿರುದ್ಧವಾಗಲಿ, ಪೊಲೀಸ್ ಅಧಿಕಾರಿಯ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ ಜಗದೀಶ್ ಕಾರಂತ ವಿರುದ್ಧವಾಗಲಿ ಸರಕಾರ ಯಾವ ಕ್ರಮ ಕೈಗೊಂಡಿದೆ? ಇದನ್ನು ನೋಡಿದಲ್ಲಿ ಸಿಎಂ, ಆರೆಸ್ಸೆಸ್, ಬಿಜೆಪಿ ನಡುವೆ ಒಳಒಪ್ಪಂದವಾಗಿದೆ ಎಂದು ಅನ್ನಿಸುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಗುಡುಗಿದ್ದಾರೆ.  
 
ಬಿಜೆಪಿಯವರಿಗಿಂತ ಸಿಎಂ ಸಿದ್ದರಾಮಯ್ಯ ಯಾವುದರಲ್ಲಿ ಕಡಿಮೆಯಿಲ್ಲ. ಅಹಿಂದ ಹೆಸರು ಹೇಳಿಕೊಂಡು ತಿರುಗುತ್ತಿರುವ ನೀವು ಅವರಿಗಾಗಿ ಏನು ಮಾಡಿದ್ದೀರಿ ಎಂದು ಪ್ರಶ್ನಿಸಿದ್ದಾರೆ?
 
ನಗರಾಭಿವೃದ್ಧಿ ಖಾತೆ ಸಚಿವ ಕೆ.ಜೆ.ಜಾರ್ಜ್ ವಿರುದ್ಧ ದಾಖಲಾಗಿರುವುದು ಕ್ರಿಮಿನಲ್ ಪ್ರಕರಣ. ಅಂತಹ ಸಚಿವರನ್ನು ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಳ್ಳುತ್ತಿರುವುದು ನಾಚಿಕೆಗೇಡಿತನದ ಸಂಗತಿ ಎಂದು ಜೆಡಿಎಸ್ ಮುಖಂಡ ಎಚ್.ವಿಶ್ವನಾಥ್ ಕಿಡಿಕಾರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಕ್ಷಣೆ ನೀಡಬೇಕಿದ್ದ ಕೈಯಿಂದಲೇ 10ರ ಬಾಲಕಿ ಮೇಲೆ ರೇಪ್ ಆಂಡ್ ಮರ್ಡರ್‌, ಕಾನ್ಸ್‌ಟೇಬಲ್ ಅರೆಸ್ಟ್‌

ಬಟ್ಟೆ ನೆನೆಯಲು ಹಾಕಿದ್ದ ಬಕೆಟ್‌ಗೆ ಬಿದ್ದು 8 ತಿಂಗಳ ಕಂದಮ್ಮ ಸಾವು

ಪ್ರಧಾನಿ ಮೋದಿಗೆ ಬೈದಿದ್ದ ವೈರಲ್ ಹುಡುಗಿ ನಿಶೂ ಮನೆ ಖಾಲಿ ಮಾಡಿಸಿದ ಮಾಲಿಕ Video

ಜಂತರ್ ಮಂತರ್‌ನಲ್ಲಿ ಭಾಗಿಯಾದ ಪ್ರತಿಭಟನಕಾರರಿಗೆ ಬಿಗ್ ರಿಲೀಫ್

Karnataka Weather: ಭಾರೀ ಮಳೆ, ಇದೇ 31ರ ವರೆಗೆ ರಾಜ್ಯದ ಈ 15ಜಿಲ್ಲೆಗಳಲ್ಲಿ ಆರೆಂಜ್ ಆಲರ್ಟ್‌

ಮುಂದಿನ ಸುದ್ದಿ
Show comments