ಸಿಎಂ, ಆರೆಸ್ಸೆಸ್, ಬಿಜೆಪಿ ನಡುವೆ ಒಳಒಪ್ಪಂದ: ಎಚ್ ವಿಶ್ವನಾಥ್ ಆರೋಪ

Webdunia
ಶನಿವಾರ, 28 ಅಕ್ಟೋಬರ್ 2017 (13:02 IST)
ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಘಪರಿವಾರ ಮತ್ತು ಬಿಜೆಪಿ ನಡುವೆ ಒಳಒಪ್ಪಂದವಿದೆ ಎಂದು ಜೆಡಿಎಸ್ ಹಿರಿಯ ಮುಖಂಡ, ಮಾಜಿ ಸಂಸದ ಎಚ್.ವಿಶ್ವನಾಥ್ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದು ಮುಸ್ಲಿಂ ಸಮುದಾಯಗಳ ಮಧ್ಯೆ ವಿಷಬೀಜ ಬಿತ್ತುತ್ತಿರುವ ಕಲ್ಲಡ್ಕ ಪ್ರಭಾಕರ್ ವಿರುದ್ಧವಾಗಲಿ, ಪೊಲೀಸ್ ಅಧಿಕಾರಿಯ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ ಜಗದೀಶ್ ಕಾರಂತ ವಿರುದ್ಧವಾಗಲಿ ಸರಕಾರ ಯಾವ ಕ್ರಮ ಕೈಗೊಂಡಿದೆ? ಇದನ್ನು ನೋಡಿದಲ್ಲಿ ಸಿಎಂ, ಆರೆಸ್ಸೆಸ್, ಬಿಜೆಪಿ ನಡುವೆ ಒಳಒಪ್ಪಂದವಾಗಿದೆ ಎಂದು ಅನ್ನಿಸುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಗುಡುಗಿದ್ದಾರೆ.  
 
ಬಿಜೆಪಿಯವರಿಗಿಂತ ಸಿಎಂ ಸಿದ್ದರಾಮಯ್ಯ ಯಾವುದರಲ್ಲಿ ಕಡಿಮೆಯಿಲ್ಲ. ಅಹಿಂದ ಹೆಸರು ಹೇಳಿಕೊಂಡು ತಿರುಗುತ್ತಿರುವ ನೀವು ಅವರಿಗಾಗಿ ಏನು ಮಾಡಿದ್ದೀರಿ ಎಂದು ಪ್ರಶ್ನಿಸಿದ್ದಾರೆ?
 
ನಗರಾಭಿವೃದ್ಧಿ ಖಾತೆ ಸಚಿವ ಕೆ.ಜೆ.ಜಾರ್ಜ್ ವಿರುದ್ಧ ದಾಖಲಾಗಿರುವುದು ಕ್ರಿಮಿನಲ್ ಪ್ರಕರಣ. ಅಂತಹ ಸಚಿವರನ್ನು ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಳ್ಳುತ್ತಿರುವುದು ನಾಚಿಕೆಗೇಡಿತನದ ಸಂಗತಿ ಎಂದು ಜೆಡಿಎಸ್ ಮುಖಂಡ ಎಚ್.ವಿಶ್ವನಾಥ್ ಕಿಡಿಕಾರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಿಎಂಸಿಯಲ್ಲಿ ಬಂಡಾಯದ ಭಾವುಟ ಹಾರಿಸಿದ ಸಂಸದರಿಂದ ಸ್ಪೀಕರ್ ಭೇಟಿ

2047ರ ವಿಕಸಿತ ಭಾರತದ ಸಂಕಲ್ಪವನ್ನು ಈಡೇರಿಸಲು ದೇಶ ಸಜ್ಜಾಗಿದೆ

ಗ್ಯಾರಂಟಿ ನಿಲ್ಲಿಸಲಾಗುತ್ತದೆ ಎಂಬ ಬಿಜೆಪಿ ಆರೋಪ ಬೆನ್ನಲ್ಲೇ ಕ್ಲಾರಿಟಿ ಕೊಟ್ಟ ಸಿಎಂ ಡಿಕೆ ಶಿವಕುಮಾರ್‌

ಒಂದೊಂದೇ ನೆಪವೊಡ್ಡಿ ಗ್ಯಾರಂಟಿಗೆ ಫಲಾನುಭವಿಗಳ ಸಂಖ್ಯೆ ಇಳಿಸುವುವಲ್ಲಿ ಕಾಂಗ್ರೆಸ್

Video, ಬಂಗೀ ಜಂಪ್ ವೇಳೆ ಸುರಕ್ಷತಾ ಹಗ್ಗವನ್ನೇ ಹಾಕಲು ಮರೆತ ಸಿಬ್ಬಂದಿ, ಯುವತಿಯ ಕೊನೆ ಕ್ಷಣದ ವಿಡಿಯೋ ಭಯ ಹುಟ್ಟಿಸುತ್ತದೆ

ಮುಂದಿನ ಸುದ್ದಿ
Show comments