Webdunia - Bharat's app for daily news and videos

Install App

ಹುಣಸೂರಿನಲ್ಲಿ ಎಚ್. ವಿಶ್ವನಾಥ್ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧೆ: ಜಿ.ಟಿ.ದೇವೇಗೌಡ

Webdunia
ಸೋಮವಾರ, 10 ಜುಲೈ 2017 (20:09 IST)
ಇತ್ತೀಚೆಗೆ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದ ಎಚ್. ವಿಶ್ವನಾಥ್ ಹುಣಸೂರು ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಲಿದ್ದಾರೆ ಎಂದು ಜೆಡಿಎಸ್ ಪಕ್ಷದ ಹಿರಿಯ ಮುಖಂಡ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಘೋಷಿಸಿದ್ದಾರೆ.
 
ಮೈಸೂರಿನ ಸಾ.ರಾ ಸಭಾಂಗಣದಲ್ಲಿ ನಡೆದ ಜೆಡಿಎಸ್ ಪಕ್ಷದ ಸೇರ್ಪಡೆ ಸಮಾವೇಶದಲ್ಲಿ ಮಾತನಾಡಿದ ಜಿ.ಟಿ ದೇವೇಗೌಡರು, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿಯಾಗಿಸಲು ಕ್ಷೇತ್ರವನ್ನು ತ್ಯಾಗ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.
 
ಜೆಡಿಎಸ್‌ಗಾಗಿ, ಕುಮಾರಣ್ಣನಿಗಾಗಿ, ದೇವೇಗೌಡರಿಗಾಗಿ ನಾನು ಮತ್ತು ನನ್ನ ಪುತ್ರ ಮತ್ತು ಪ್ರಜ್ವಲ್ ವಿಧಾನಸಭಾ ಕ್ಷೇತ್ರವನ್ನು ವಿಶ್ವನಾಥ್‌ಗೆ ಬಿಟ್ಟುಕೊಟ್ಟಿದ್ದೇವೆ ಎಂದು ಹೇಳಿದ್ದಾರೆ. 
 
ಹುಣಸೂರು ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಲು ಜಿ.ಟಿ.ದೇವೇಗೌಡ, ಹರೀಶ್ ಗೌಡ ಮತ್ತು ಪ್ರಜ್ವಲ್ ಹರಸಾಹಸ ನಡೆಸಿದ್ದರು. ಆದರೆ, ಇದೀಗ ಎಚ್. ವಿಶ್ವನಾಥ್ ಜೆಡಿಎಸ್ ಅಭ್ಯರ್ಥಿಯಾಗಿ ಉಹಾಪೋಹಗಳಿಗೆ ಅಂತ್ಯಹಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments