Publish Date: Sat, 24 Jun 2017 (13:23 IST)
Updated Date: Sat, 24 Jun 2017 (13:26 IST)
ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷಎಚ್.ಡಿ.ಕುಮಾರಸ್ವಾಮಿಯವರನ್ನು ಇಂದು ಮಾಜಿ ಸಂಸದ ಎಚ್.ವಿಶ್ವನಾಥ್ ಭೇಟಿ ಮಾಡಿ ಚರ್ಚಿಸಿರುವುದು ತೀವ್ರ ಕುತೂಹಲ ಕೆರಳಿಸಿದೆ.
ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿರುವ ಆದಿ ಚುಂಚನಗಿರಿ ಮಠದಲ್ಲಿ ಅಮಾವಾಸ್ಯೆ ಪೂಜೆಗಾಗಿ ಬಂದಿದ್ದ ಕುಮಾರಸ್ವಾಮಿಯವರನ್ನು ವಿಶ್ವನಾಥ್ ಭೇಟಿ ಮಾಡಿದರು.
ಉಭಯ ನಾಯಕರು ಶ್ರೀಗಳ ಆಶೀರ್ವಾದ ಪಡೆದು ಕೆಲ ಕಾಲ ಚರ್ಚೆ ನಡೆಸಿ ತೆರಳಿದರು ಎಂದು ಮೂಲಗಳು ತಿಳಿಸಿವೆ.
ಮಾಜಿ ಸಂಸದ ಎಚ್.ವಿಶ್ವನಾಥ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರಿಂದ, ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆಯೇ ಎನ್ನುವ ಕುತೂಹಲ ಕೆರಳಿಸಿದೆ.
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ.
http://kannada.fantasycricket.webdunia.com/
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.