Webdunia - Bharat's app for daily news and videos

Install App

ರಾಜ್ಯ ಸರ್ಕಾರದ ನಡೆ ಹೊಗಳಿ, ಸೋನಿಯಾ ಗಾಂಧಿಯನ್ನು ಟೀಕಿಸಿದ ಎಚ್ ವಿಶ್ವನಾಥ್, ಕಾರಣವೇನು

Sampriya
ಗುರುವಾರ, 12 ಡಿಸೆಂಬರ್ 2024 (17:44 IST)
Photo Courtesy X
ಮೈಸೂರು: ಮಾಜಿ ಮುಖ್ಯಮಂತ್ರಿ, ಮಾಜಿ ಸಚಿವ ದಿವಂಗತ ಎಸ್‌ಎಂ ಕೃಷ್ಣ ಅವರು ರಾಜ್ಯದಲ್ಲಿ ಕಾಂಗ್ರೆಸ್‌ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿದ್ದ ಅವರಿಗೆ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಸಂತಾಪ ಸೂಚಿಸಲಿಲ್ಲವೇಕೆ ಎಂದು ಬಿಜೆಪಿಯ ವಿಧಾನಪರಿಷತ್‌ ಸದಸ್ಯ ಎ.ಎಚ್. ವಿಶ್ವನಾಥ್ ಪ್ರಶ್ನೆ ಮಾಡಿದ್ದಾರೆ.

ಇಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು, ನಮ್ಮ ಪಕ್ಷದವರಲ್ಲ, ಸತ್ತಾಗಲೂ ದ್ವೇಷ ಮಾಡಬೇಕು ಎಂಬ ಮನಸ್ಥಿತಿಯನ್ನು ರಾಜಕಾರಣಿಗಳು ಬಿಡಬೇಕು. ರಾಜಕಾರಣವನ್ನು ಸಾವಿನಲ್ಲೂ ಪ್ರದರ್ಶಿಸುವುದು ಸರಿಯಲ್ಲ ಎಂದರು.

ಆದರೆ ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರ ಎಸ್‌ಎಂ ಕೃಷ್ಣ ಅವರಿಗೆ ಗೌರವಯುತವಾದ ವಿದಾಯ ಹೇಳುವಲ್ಲಿ ಮಾದರಿಯಾಗಿ ನಡೆದುಕೊಂಡಿದೆ. ಇದಕ್ಕಾಗಿ ಮುಖ್ಯಮಂತ್ರಿ, ಡಿಸಿಎಂ ಡಿ.ಕೆ. ಶಿವಕುಮಾರ್, ಇಡೀ ಮಂತ್ರಿ‌ ಮಂಡಲಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ಕೃಷ್ಣ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸಲ್ಲಿಸಿದರು. ಆದರೆ, ಸೋನಿಯಾ ಗಾಂಧಿ ಸಂತಾಪ ವ್ಯಕ್ತಪಡಿಸಿಲ್ಲ. ರಾಜಕಾರಣದಲ್ಲಿ ಇಂಥಾದ್ದು ನಡೆಯಬಾರದು. ಏಕೆ ಅವರು ಕಾಂಗ್ರೆಸ್‌ಗೆ ದುಡಿಯಲಿಲ್ಲವೇ ಎಂದು ಪ್ರಶ್ನಿಸಿದರು.

ಇನ್ನೂ ಐಟಿ ಬಿಟಿ, ಇನ್ಫೊಸಿಸ್‌ ಸಂತಾಪ ಸೂಚಿಸಿಲ್ಲ. ಯಾರಾದರೂ ತೀರಿಕೊಂಡರೆ ಅವರನ್ನು ವ್ಯಕ್ತಿತ್ವ, ಕೆಲಸ ಹಾಗೂ ಕೊಡುಗೆ ಮುಖ್ಯ ಆಗಬೇಕೇ ಹೊರತು ದ್ವೇಷವಲ್ಲ. ಐಟಿ ಬಿಟಿಯವರು, ಇನ್ಫೊಸಿಸ್ ಮೊದಲಾದ ಕಂಪನಿಗಳು ಸಂತಾಪ ಸೂಚಿಸಬೇಕಿತ್ತಲ್ಲವೇ? ಇವರೆಲ್ಲರೂ ಯಾರಿಂದ ಬೆಳೆದರು? ನಾವೆಲ್ಲರೂ ಮನುಷ್ಯತ್ವ ಕಳೆದುಕೊಂಡು ಬಿಟ್ಟಿದ್ದೇವೆಯೇ ಎಂದು ಪ್ರಶ್ನೆ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಮುಂದಿನ ಸುದ್ದಿ
Show comments