Select Your Language

Notifications

webdunia
webdunia
webdunia
webdunia

ರಾಜ್ಯ ಬಜೆಟ್​ ಬಗ್ಗೆ ಹೆಚ್.ವಿಶ್ವನಾಥ್ ಮೆಚ್ಚುಗೆ

ರಾಜ್ಯ ಬಜೆಟ್​ ಬಗ್ಗೆ ಹೆಚ್.ವಿಶ್ವನಾಥ್ ಮೆಚ್ಚುಗೆ
bangalore , ಶನಿವಾರ, 8 ಜುಲೈ 2023 (14:57 IST)
ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್​​ಗೆ ವಿಧಾನಪರಿಷತ್ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್ ಮೆಚ್ಚುಗೆಯ ಮಾತುಗಳನಾಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಯಾವುದೇ ಸರ್ಕಾರಗಳು ಬಂದರೂ ಅಕ್ಷರ, ಅನ್ನ, ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಬೇಕು. ಅದೇ ರೀತಿ ಸಿಎಂ ಸಿದ್ದರಾಮಯ್ಯನವರು ಈ 3ಕ್ಷೇತ್ರಕ್ಕೂ ಹೆಚ್ಚಿನ ಆದ್ಯತೆ ನೀಡಿದ್ದಾರೆ ಅಂತಾ ಸಿಎಂ ಸಿದ್ದರಾಮಯ್ಯರನ್ನ ಹಾಡಿಹೊಗಳಿದ್ದಾರೆ... ಈ ಬಾರಿಯ ಎಲ್ಲಾ ವರ್ಗದ ಜನತೆಗೆ ಬಜೆಟ್​​​ನಲ್ಲಿ ಒಳಿತನ್ನ ಮಾಡಿದೆ. ಕನ್ನಡ ಪುಸ್ತಕ ಖರೀದಿಗೆ ಯಾವುದೇ ಸರ್ಕಾರಗಳು ಹಣ ನೀಡಿರಲಿಲ್ಲ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕನ್ನಡ ಪುಸ್ತಕ ಖರೀದಿಗೆ ಹಣ ನೀಡಿದೆ. ಈ ಸರ್ಕಾರ ಅಚ್ಚ ಕನ್ನಡದ ಸರ್ಕಾರ ಎಂದು ಹೇಳಿದರೆ ತಪ್ಪಾಗಲಿಕ್ಕಿಲ್ಲ ಅಂತಾ ಮೆಚ್ಚುಗೆಯ ಮಾತುಗಳನಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ತಾತ್ಕಾಲಿಕವಾಗಿ ಅಮರನಾಥ ಯಾತ್ರೆ ರದ್ದು!