Select Your Language

Notifications

webdunia
webdunia
webdunia
webdunia

ಎಚ್.ವಿಶ್ವನಾಥ್ ಕಾಂಗ್ರೆಸ್ ತೊರೆಯುವುದು ಅನುಮಾನ: ಸಚಿವ ಮಹಾದೇವಪ್ಪ

ಎಚ್.ವಿಶ್ವನಾಥ್ ಕಾಂಗ್ರೆಸ್ ತೊರೆಯುವುದು ಅನುಮಾನ: ಸಚಿವ ಮಹಾದೇವಪ್ಪ
ಮೈಸೂರು , ಬುಧವಾರ, 24 ಮೇ 2017 (15:49 IST)
ಹಿರಿಯ ಕಾಂಗ್ರೆಸ್ ಮುಖಂಡ ಎಚ್.ವಿಶ್ವನಾಥ್ ಕಾಂಗ್ರೆಸ್ ತೊರೆಯುವುದು ಅನುಮಾನವಾಗಿದೆ. ಸದ್ಯಕ್ಕೆ ಅವರು ಕಾಂಗ್ರೆಸ್‌ನಲ್ಲಿದ್ದಾರೆ ಎಂದು ಲೋಕೋಪಯೋಗಿ ಸಚಿವ ಎಚ್.ಸಿ.ಮಹಾದೇವಪ್ಪ ಹೇಳಿದ್ದಾರೆ.
 
ಎಚ್‌.ವಿಶ್ವನಾಥ್ ಜೆಡಿಸ್ ಸೇರ್ಪಡೆ ಕುರಿತಂತೆ ವೇದಿಕೆ ಸಿದ್ದವಾಗಿರುವುದು ನಾನು ನೋಡಿಲ್ಲ. ಅವರು ಪಕ್ಷ ತೊರೆಯುವ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ ಎಂದು ತಿಳಿಸಿದ್ದಾರೆ.
 
ಸಿಎಂ ಸಿದ್ದರಾಮಯ್ಯ ವಿರುದ್ಧ ನಿರಂತರ ವಾಗ್ದಾಳಿ ನಡೆಸುತ್ತಿರುವ ಹಿರಿಯ ಕಾಂಗ್ರೆಸ್ ಮುಖಂಡ ಎಚ್.ವಿಶ್ವನಾಥ್ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎನ್ನುವ ಉಹಾಪೋಹಗಳು ಹರಡಿವೆ.
 
ಆದರೆ, ಮಾಜಿ ಸಂಸದ ವಿಶ್ವನಾಥ್ ಅಧಿಕೃತವಾಗಿ ಬೇರೆ ಪಕ್ಷಕ್ಕೆ ಸೇರ್ಪಡೆಯಾಗುವ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ. ಒಂದು ವೇಳೆ ಕಾಂಗ್ರೆಸ್ ಪಕ್ಷ ತೊರೆದಲ್ಲಿ ಜೆಡಿಎಸ್ ಪಕ್ಷಕ್ಕೆ ಹೋಗುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಜೈಲಿಗೆ ಹಾಕಿ, ನೇಣಿಗೆ ಹಾಕಿ ನಿಮ್ಮನ್ನು ನಾನು ತಡೆಯುವುದಿಲ್ಲ: ಕುಮಾರಸ್ವಾಮಿ