Select Your Language

Notifications

webdunia
webdunia
webdunia
webdunia

ಮೈಸೂರು ಜಿಲ್ಲೆಯನ್ನು ಸಿಎಂ ಸಿದ್ದರಾಮಯ್ಯಗೆ ಅಡವಿಟ್ಟಿಲ್ಲ: ಎಚ್.ವಿಶ್ವನಾಥ್

ಮೈಸೂರು ಜಿಲ್ಲೆಯನ್ನು ಸಿಎಂ ಸಿದ್ದರಾಮಯ್ಯಗೆ ಅಡವಿಟ್ಟಿಲ್ಲ: ಎಚ್.ವಿಶ್ವನಾಥ್
ಮೈಸೂರು , ಗುರುವಾರ, 25 ಮೇ 2017 (13:21 IST)
ಮೈಸೂರು ಜಿಲ್ಲೆಯನ್ನು ಸಿಎಂ ಸಿದ್ದರಾಮಯ್ಯಗೆ ಅಡವಿಟ್ಟಿಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಂಸದ ಎಚ್.ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಕೆಪಿಸಿಸಿಯನ್ನು ಸಿಎಂ ಸಿದ್ದರಾಮಯ್ಯಗೆ ಗಿರವಿ ಇಟ್ಟಿಲ್ಲ. ನಿನ್ನೆ ನಡೆದ ಕಾಂಗ್ರೆಸ್ ಸಭೆಗೆ ನನ್ನನ್ನು ಆಹ್ವಾನಿಸಿಲ್ಲ. ಯಾಕೆಂದು ಕೇಳಿದ್ರೆ ಅದು ಸಿಎಂಗೆ ಬಿಟ್ಟಿದ್ದು ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳುತ್ತಿದ್ದಾರೆಂದು ವಾಗ್ದಾಳಿ ನಡೆಸಿದ್ದಾರೆ.
 
ನಾನು ಕಾಂಗ್ರೆಸ್ ತೊರೆಯುವುದಿಲ್ಲ ಎಂದು ಹೇಳಿದ್ರೂ ಕಾಂಗ್ರೆಸ್ ಪಕ್ಷದಿಂದ ಹೊರ ಹಾಕಲು ನನ್ನ ವಿರುದ್ಧ ಪಿತೂರಿ ನಡೆಯುತ್ತಿದೆ. ಇದರಲ್ಲಿ ಹಿರಿಯ ನಾಯಕರು ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ.
 
ಕಾಂಗ್ರೆಸ್ ಪಕ್ಷವನ್ನು ತೊರೆಯುವಂತಹ ವಾತಾವರಣ ಸೃಷ್ಟಿಸಲಾಗುತ್ತಿದೆ. ಆದಾಗ್ಯೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹೊತ್ತಿರುವ ಕೆ.ಸಿ.ವೇಣುಗೋಪಾಲ್ ಏನು ಮಾಡುತ್ತಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಂಸದ ಎಚ್.ವಿಶ್ವನಾಥ್ ಗುಡುಗಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನಲ್ಲಿ ಮೂವರು ಪಾಕ್ ಪ್ರಜೆಗಳ ಬಂಧನ