Webdunia - Bharat's app for daily news and videos

Install App

ಯಾರು ಕೂಡ ರಾಹುಲ್ ಗಾಂಧಿಯನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ: ಶಿವರಾಜ್ ಸಿಂಗ್ ಚೌಹಾಣ್

Webdunia
ಗುರುವಾರ, 15 ಡಿಸೆಂಬರ್ 2016 (11:45 IST)
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಬಗ್ಗೆ ನನಗೆ ಕನಿಕರವೆನಿಸುತ್ತದೆ. ಅವರ ಮಾತುಗಳನ್ನು ಯಾರು ಕೂಡ ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದು  ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ವ್ಯಂಗ್ಯವಾಡಿದ್ದಾರೆ. 

ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿ ಮಾತನ್ನಾಡುತ್ತಿದ್ದ ಸಿಎಂ, ಪ್ರಧಾನಿ ಮೋದಿ ಅವರ ಮೇಲೆ ರಾಹುಲ್ ಭ್ರಷ್ಟಾಚಾರ ಆರೋಪ ಹೊರಿಸಿರುವುದಕ್ಕೆ ಪ್ರತಿಕ್ರಿಯಿಸಿಯಿರಿ ಎನ್ನಲಾಗಿ, ರಾಹುಲ್ ಗಾಂಧಿಯನ್ನು ನಮ್ಮ ದೇಶದಲ್ಲಿ ಯಾರು ಕೂಡ ಗಂಭೀರವಾಗಿ ಪರಿಗಣಿಸುವುದಿಲ್ಲ ಮತ್ತು ಅವರನ್ನು ನಂಬುವುದಿಲ್ಲ. ಹೀಗಾಗಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಬೇಕಾಗದ ಅಗತ್ಯವೇ ಇಲ್ಲ ಎಂದಿದ್ದಾರೆ. 
 
ಪ್ರಧಾನಿ ಬಗ್ಗೆ ಹೇಳುವುದಾದರೆ, ಅವರೊಬ್ಬ ಯುಗಪುರುಷ, ನಿಸ್ವಾರ್ಥ ಕರ್ಮಯೋಗಿ, ದೇಶಭಕ್ತ. ದೇಶ ಸುಧಾರಣೆ, ಜನ ಕಲ್ಯಾಣ ಹೊರತು ಪಡಿಸಿ ಬೇರೆನನ್ನು ಅವರು ಯೋಚಿಸಲಾರರು. ಅವರದು ಬಹುದೊಡ್ಡ ವ್ಯಕ್ತಿತ್ವ. ಜತೆಗೆ ಅವರ ನಡೆಯನ್ನು ದೇಶವಾಸಿಗಳು ಕಣ್ಣುಮುಚ್ಚಿಕೊಂಡು ಅವರನ್ನು ಅನುಸರಿಸುತ್ತದೆ. ಮೋದಿ ಹೆಸರು ಈ ರೀತಿಯಲ್ಲಿ ಪವಾಡ ಸೃಷ್ಟಿಸಿರುವುದು ರಾಹುಲ್ ಗಾಂಧಿಗೆ ಬಹಳ ನೋವನ್ನುಂಟು ಮಾಡುತ್ತಿದೆ ಎಂದು ಮೂರು ಬಾರಿ ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿರುವ ಚೌಹಾಣ್ ಹೇಳಿದ್ದಾರೆ. 
 
ಪ್ರಧಾನಿ ಮೋದಿ ಅವರು ವೈಯಕ್ತಿಕವಾಗಿ ಭ್ರಷ್ಟಾಚಾರ ಎಸಗಿರುವ ಬಗ್ಗೆ ನನ್ನ ಬಳಿ ವಿವರವಾದ ಮಾಹಿತಿ ಇದೆ ಎಂದು ರಾಹುಲ್ ಗಾಂಧಿ ನಿನ್ನೆ ಹೇಳಿದ್ದರು. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ