ಬಾಣಂತಿ ಸೇರಿ ಅವಳಿ ಹೆಣ್ಣು ಶಿಶು ಬಲಿಪಡೆದ ಎಚ್ 1 ಎನ್ 1

Webdunia
ಮಂಗಳವಾರ, 16 ಅಕ್ಟೋಬರ್ 2018 (14:27 IST)
ಬಾಣಂತಿ ಸೇರಿ ಆಕೆಯ ಅವಳಿ ನವಜಾತ ಶಿಶುಗಳು ಸಾವನಪ್ಪಿರುವ ದಾರುಣ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ತುಮಕೂರು ಜಿಲ್ಲೆಯಲ್ಲೂ ಮಾರಕ ರೋಗ ಎಚ್1ಎನ್1 ಗೆ ಜನರು ಬಲಿಯಾಗುತ್ತಿದ್ದಾರೆ. ಬಾಣಂತಿ ಸೇರಿ ಆಕೆಯ ಅವಳಿ ನವಜಾತ ಶಿಶುಗಳು ಸಾವನಪ್ಪಿದ್ದ ದಾರುಣ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆದರೆ ಈ ಸಾವನ್ನು ಆರೋಗ್ಯ ಇಲಾಖೆ ತಡವಾಗಿ ದೃಢಿಕರಿಸಿದೆ.

ತುಮಕೂರು ತಾಲೂಕಿನ ಕುಪ್ಪೂರು ಗ್ರಾಮದ ರಂಗನಾಥ್ ಅವರ ಪತ್ನಿ ಕಾವ್ಯಾ ಹಾಗೂ ಆಕೆಯ ನವಜಾತ ಅವಳಿ ಹೆಣ್ಣು ಶಿಶುಗಳು ಆಗಸ್ಟ್ 27 ರಂದೇ ಎಚ್1ಎನ್1 ಗೆ ಬಲಿಯಾಗಿವೆ.  ಆದರೆ ನ್ಯುಮೋನಿಯಾ ದಿಂದ ಸಾವನಪ್ಪಿದ್ದರು ಎಂದು ಹೇಳಲಾಗಿತ್ತು. ಈಗ ಬಂದ ವರದಿ ಪ್ರಕಾರ  ಎಚ್1ಎನ್1 ನಿಂದಲೇ ಅಸುನೀಗಿದ್ದಾರೆ ಎಂದು ಆರೋಗ್ಯ ಇಲಾಖೆ ದೃಢೀಕರಿಸಿದೆ. 7 ತಿಂಗಳ ಗರ್ಭಿಣಿಯಾದ ಕಾವ್ಯಾಳಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೊದಲು ತುಮಕೂರು ದೊಡ್ಡಮನೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಜ್ವರ ಹತೋಟಿಗೆ ಬಾರದೇ ಇದ್ದಾಗ ಕ್ರಮವಾಗಿ ಬೆಂಗಳೂರಿನ ವಾಣಿವಿಲಾಸ್, ಚಿನ್ಮಯ, ಹಾಗೂ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು.

ಆದರೆ ಮಣಿಪಾಲ್ ಆಸ್ಪತ್ರೆಯಲ್ಲಿ ಕಾವ್ಯಾ ಅವಳಿ ಹೆಣ್ಣುಮಕ್ಕಳಿಗೆ ಜನ್ಮ ನೀಡಿದರೂ  ಅವು  ಎಚ್1ಎನ್1 ಗೆ ಬಲಿಯಾಗಿದೆ. ಆಗ ತಕ್ಷಣ ಕಾವ್ಯಾಳನ್ನು ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗುತ್ತದೆ. ಅಲ್ಲಿ ಕಾವ್ಯಾಗೆ ಚಿಕಿತ್ಸೆ ಫಲಕಾರಿಯಾಗದೇ‌ ಸಾವನಪ್ಪಿದ್ದಾಳೆ. ಈ ಸಾವಿನಿಂದಾಗಿ ಜಿಲ್ಲೆಯ ಜನತೆಯಲ್ಲಿ ಮಾರಕ ರೋಗ ಎಚ್1ಎನ್1 ರ ಭೀತಿ ಶುರುವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ನಾಯಕರ ಮಾತಿಗೆ ರೈತರು ಮರಳಾಗಬೇಡಿ: ಸಿಎಂ ಸಿದ್ದರಾಮಯ್ಯ

ಅದೆಲ್ಲಾ ಯಾವ ಪುರುಷಾರ್ಥಕ್ಕೆ ಎಂದಿದ್ಯಾಕೆ ಎಚ್ ಡಿ ಕುಮಾರಸ್ವಾಮಿ

Meerut Saurabh Rajput Case: ಊರೇ ಬಿಡಲು ಮುಂದಾದ ಆರೋಪಿ ಮುಸ್ಕಾನ್ ಕುಟುಂಬ

ಗಾಲಿಕುರ್ಚಿಯಲ್ಲಿ ಕೂತಿದ್ದ ಪ್ರತೀಕಾ ರಾವಲ್‌ ನೋಡಿ ಮೋದಿ ಏನ್ಮಾಡಿದ್ರೂ ನೋಡಿ

ಬೆಂಗಳೂರು ಎರ್ನಾಕುಲಂ ಸೇರಿದಂತೆ ನಾಲ್ಕು ವಂದೇ ಭಾರತ್ ರೈಲುಗಳಿಗೆ ನರೇಂದ್ರ ಮೋದಿ ಚಾಲನೆ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments