ಮಹಾರಾಷ್ಟ್ರದಿಂದ ಬಂದು ಕೈಚಳಕ ; ಖತರ್ನಾಕ್ ಕಳ್ಳರಿಂದ 1.5 ಕೆಜಿ ಚಿನ್ನ, 15 ಕೆಜಿ ಬೆಳ್ಳಿ ವಶ

Webdunia
ಸೋಮವಾರ, 23 ಮಾರ್ಚ್ 2020 (18:58 IST)
ಮಹಾರಾಷ್ಟ್ರದಿಂದ ಬಂದು ರಾಜ್ಯದಲ್ಲಿ ಕಳ್ಳತನ ಮಾಡಿ ತಲೆ ಮರೆಸಿಕೊಳ್ಳುತ್ತಿದ್ದ ಖತರ್ನಾಕ್ ಕಳ್ಳರ ಗುಂಪನ್ನು ಪೊಲೀಸರು ಬಂಧನ ಮಾಡಿದ್ದಾರೆ.

ಕಳೆದ ಐದು ವರ್ಷಗಳ ಅವಧಿಯಲ್ಲಿ ಜಿಲ್ಲೆಯ ಬಳ್ಳಾರಿ ಮತ್ತು ಹೊಸಪೇಟೆ ನಗರದಲ್ಲಿನ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಹೊಸಪೇಟೆ ಉಪವಿಭಾಗದ ಪೊಲೀಸ್‌ ಅಧಿಕಾರಿಗಳು ಮೂವರು ಕಳ್ಳರನ್ನು ಬಂಧಿಸಿದ್ದಾರೆ. ಬಂಧಿತರಿಂದ 1.680 ಕೆಜಿ ಚಿನ್ನ ಮತ್ತು 15.33 ಕೆಜಿ ಬೆಳ್ಳಿ ಸೇರಿ ಒಟ್ಟು 71.09 ಲಕ್ಷ ಮೌಲ್ಯದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸ್ಪಿ ಸಿ.ಕೆ.ಬಾಬಾ ತಿಳಿಸಿದ್ದಾರೆ.

ಬಂಧಿತರು ಮಹಾರಾಷ್ಟ್ರದ ಔರಂಗಬಾದ್‌ ಜಿಲ್ಲೆಯ ಗಂಗಾಪುರ ತಾಲೂಕಿನ  ಪಕೋರ ಗ್ರಾಮದ  ಪಾರಧಿ ಜನಾಂಗದ  ಬಚ್ಚನ್‌ ತಂದೆ  ಭೀಮಕಾಳೆ(27), ಔರಂಗಬಾದ್‌ ಜಿಲ್ಲೆ ಗಂಗಾಪುರ ತಾಲೂಕಿನ ವಜರ್‌ ನಿವಾಸಿ ಪಾರಧಿ ಜನಾಂಗದ ವಿವೇಕ್‌ ತಂದೆ ಕಮಲಾಕರ್‌  ಪಿಂಪಳೆ(38). ಪತ್ಯೇಕ ಪ್ರಕರಣದಲ್ಲಿ ಆರೋಪಿ ಹೊಸಪೇಟೆ ನಿವಾಸಿ ಪೆನ್ನಪ್ಪ ತಂದೆ ಹನುಮಂತಪ್ಪ(37) ಬಂಧಿತ ಆರೋಪಿಗಳಾಗಿದ್ದಾರೆ.

ಔರಂಗಬಾದ್‌ನಿಂದ ಕಳ್ಳತನ ಮಾಡಲು ಹೊಸಪೇಟೆಗೆ ಆಗಮಿಸಿದ್ದು, ಹೊಸಪೇಟೆ ಸುತ್ತಮುತ್ತ ಕಳ್ಳತನ ಮಾಡಿ ಈ ಗ್ಯಾಂಗ್ ತಲೆ ಮರೆಸಿಕೊಳ್ಳುತ್ತಿತ್ತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಳ್ಳಾರಿ ಶೂಟೌಟ್ ಪ್ರಕರಣ: ತನಿಖೆಯಲ್ಲಿ ದಿಟ್ಟ ನಿರ್ಧಾರ ಕೈಗೊಂಡ ರಾಜ್ಯ ಸರ್ಕಾರ

ಹಿ.ಪ್ರದೇಶ: ಕಂದಕಕ್ಕೆ ಉರುಳಿದ ಖಾಸಗಿ ಬಸ್‌, 9 ಮಂದಿ ಸಾವು, 40ಮಂದಿಗೆ ಗಾಯ

ಮಮತಾ ಬ್ಯಾನರ್ಜಿ ಹೆಣ್ಣು ಹುಲಿ, ಶರಣಾಗಲ್ಲ: ಮೆಹಬೂಬಾ ಮುಫ್ತಿ

ಆತ್ಮಹತ್ಯೆಗೆ ಶರಣಾದ ಡೆಂಟಲ್ ವಿದ್ಯಾರ್ಥಿನಿ, ಇದೇ ಕಾರಣಕ್ಕೆ ಪ್ರಾಣ ಕಳೆದುಕೊಂಡ್ಳ ಯುವತಿ

ಈ ವಿಚಾರಕ್ಕೆ ಪ್ರಹ್ಲಾದ್ ಜೋಶಿ ಮೊದಲು ಪ್ರತಿಕ್ರಿಯಿಸಲಿ: ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments