ಅಕ್ಷಯ ಪಾತ್ರೆ ಯೋಜನೆಯ ಜೊತೆ ಕೈ ಜೋಡಿಸಿದ ಹೆಚ್ಎಎಲ್

Webdunia
ಬುಧವಾರ, 18 ಆಗಸ್ಟ್ 2021 (21:12 IST)
ಬೆಂಗಳೂರು: ಎಚ್‌ಎಎಲ್ ಪ್ರಾಯೋಜಿತ ಅಕ್ಷಯ ಪಾತ್ರೆಯ ಅಡುಗೆಮನೆಯನ್ನು ಬುಧವಾರ ಬೆಂಗಳೂರಿನ ಗುನ್ಯಾಗ್ರಹಾರ  ಗ್ರಾಮದಲ್ಲಿ ಸಿಎಂಡಿ ಆರ್ ಮಾಧವನ್ ಉದ್ಘಾಟಿಸಿದರು.
ನಾವು ಈ ಉದಾತ್ತ ಕೆಲಸಕ್ಕೆ ಕೈಜೋಡಿಸುತ್ತಿರುವುದಕ್ಕೆ ಹೆಮ್ಮೆ ಪಡುತ್ತೇವೆ. ಮಕ್ಕಳು
ಬೆಳೆದಂತೆ ಶಿಕ್ಷಣ ಮತ್ತು ಆಹಾರವು ಅವಿಭಾಜ್ಯ ಅಂಗವಾಗಿದೆ ಎಂದು ನಾವು ನಂಬುತ್ತೇವೆ. ಹೆಚ್ಎಎಲ್ ಇಂತಹ ಕೆಲಸಗಳಿಗೆ ಸದಾ ಜೊತೆಯಾಗಿ ನಿಲ್ಲುತ್ತದೆ ಎಂದರು.
ಮಕ್ಕಳು ಮತ್ತು ಪೋಷಕರನ್ನು ಉದ್ದೇಶಿಸಿ ಮಾತನಾಡುತ್ತಾ ಈ ಅಡುಗೆಮನೆಯು ಪ್ರತಿದಿನ ಸುಮಾರು 7500 ಮಕ್ಕಳಿಗೆ ಊಟ  ನೀಡಲಿದ್ದು, ಬೆಂಗಳೂರಿನಲ್ಲಿ ಇದು ನಾಲ್ಕನೆಯದ್ದಾಗಿದೆ. ಈ  ಅತ್ಯಾಧುನಿಕ ಅಡುಗೆಮನೆ ಮೂಲಸೌಕರ್ಯದೊಂದಿಗೆ ಉತ್ತಮ ಸುರಕ್ಷತೆ ಮತ್ತು ನೈರ್ಮಲ್ಯ ಮಾನದಂಡಗಳನ್ನು ಹೊಂದಿದೆ ಎಂದು ತಿಳಿಸಿದರು.
ಅಕ್ಷಯ ಪಾತ್ರ ಪ್ರತಿಷ್ಠಾನದ ಉಪಾಧ್ಯಕ್ಷ ಚಂಚಲಪತಿ ದಾಸ್  ಮಾತನಾಡಿ ಇಂತಹ ಪಾಲುದಾರಿಕೆಗಳು ಶಕ್ತಿಯುತವಾದ ಸಾಮಾಜಿಕ ಕಾರ್ಯಗಳನ್ನು ನಿರ್ವಹಿಸಲು ನಿರ್ಣಾಯಕವಾಗಿದೆ ಮತ್ತು ಹೆಚ್.ಎ.ಎಲ್ ಸಂಸ್ಥೆಯ ಬೆಂಬಲಕ್ಕಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ರುಚಿಕರ, ನೈರ್ಮಲ್ಯಯುಕ್ತ ಮತ್ತು ಪೌಷ್ಟಿಕ ಆಹಾರದೊಂದಿಗೆ ಹೆಚ್ಚಿನ ಮಕ್ಕಳನ್ನು ತಲುಪುವ ಪ್ರತಿಷ್ಠಾನದ ಬದ್ಧತೆಯನ್ನು ಇಮ್ಮಡಿಗೊಳಿಸುತ್ತದೆ. ಪ್ರತಿಷ್ಠಾನವು ಕರ್ನಾಟಕದಲ್ಲಿ ಸುಮಾರು ನಾಲ್ಕು ಲಕ್ಷ ಮತ್ತು ದೇಶಾದ್ಯಂತ ಸುಮಾರು 17 ಲಕ್ಷ ಮಕ್ಕಳಿಗೆ ಆಹಾರವನ್ನು ನೀಡುತ್ತದೆ ಎಂದು ಹೇಳಿದರು.
2.5 ಕೋಟಿ ರೂ ವೆಚ್ಚದ ಅಡುಗೆ ಮನೆ: 
2.5 ಕೋಟಿ ರೂ ವೆಚ್ಚದ ಎಚ್‌ಎಎಲ್ ನ  ಸಿಎಸ್‌ಆರ್ ಯೋಜನೆಯಡಿಯ ಹೊಸ ಅಡುಗೆಮನೆಯು ಎಫ್ಲುಯೆಂಟ್ ಟ್ರೀಟ್ಮೆಂಟ್ ಪ್ಲಾಂಟ್ (ಇಟಿಪಿ), ನೀರಿನ ಸಂಸ್ಕರಣಾ ಘಟಕ, ಸೋಲಾರ್ ವಾಟರ್ ಹೀಟರ್, ಸಂಬಂಧಿಸಿದ ಅಡುಗೆ ಸಲಕರಣೆಗಳನ್ನು  ಒಳಗೊಂಡಿದೆ. ಹೊಸ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ, ಬಡಿಸುವ ಸಮಯದಲ್ಲಿ ಆಹಾರದ ತಾಪಮಾನವನ್ನು 65 ಡಿಗ್ರಿ ಸೆಂಟಿಗ್ರೇಡ್‌ಗಿಂತ ಹೆಚ್ಚು ನಿರ್ವಹಿಸಬೇಕು ಮತ್ತು ಈ ಅಡುಗೆಮನೆಗೆ ಒದಗಿಸಲಾದ ಪಾತ್ರೆಗಳು ಅಗತ್ಯವನ್ನು ಪೂರೈಸುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ ಆಮಿಷ: ಡಿಸಿಎಂ ಡಿ.ಕೆ. ಶಿವಕುಮಾರ್, Video

ಪಂಚ ರಾಜ್ಯದ ಚುನಾವಣೆಗೆ ಮುಹೂರ್ತ ಫಿಕ್ಸ್‌, ಕರ್ನಾಟಕದಲ್ಲೂ ರಂಗೇರಲಿದೆ ಚುನಾವಣಾ ಕಾವು

ಕದನ ವಿರಾಮ ತಳ್ಳಿಹಾಕಿದ ಡೊನಾಲ್ಡ್ ಟ್ರಂಪ್: ಇರಾನ್‌ ಸರ್ವೋಚ್ಚ ನಾಯಕನ ಬಗ್ಗೆ ಹೇಳಿದ್ದೇನು

ಇಸ್ರೇಲ್ ಪ್ರಧಾನಿ ನೆತನ್ಯಾಹು ಸಾವು ವದಂತಿ, ಸ್ಪಷ್ಟನೆ ಕೊಟ್ಟ ಪ್ರಧಾನಿ ಕಚೇರಿ

ಡಿಕೆ ಶಿವಕುಮಾರ್ ಮಾತಿಗೆ ಮುಂದಾದ ಕಾಡುಗಳ್ಳ ವೀರಪ್ಪನ್ ಪುತ್ರಿ ವಿದ್ಯಾರಾಣಿ ಹಿಂದಿದೆಯಾ ಈ ಉದ್ದೇಶ

ಮುಂದಿನ ಸುದ್ದಿ
Show comments