Webdunia - Bharat's app for daily news and videos

Install App

ವಿಮಾನದ ಹಿಂದಿದ್ದ ಹನುಮಂತನ ಚಿತ್ರ ತೆಗೆದ ಹೆಚ್ಎಎಲ್

Webdunia
ಮಂಗಳವಾರ, 14 ಫೆಬ್ರವರಿ 2023 (19:52 IST)
ಬೆಂಗಳೂರು : ಏರೋ ಇಂಡಿಯಾ ‘ಏರ್ ಶೋ 2023’ ರಲ್ಲಿ ಪ್ರದರ್ಶನದಲ್ಲಿದ್ದ ಹೆಚ್ಎಲ್ಎಫ್ಟಿ-42 ತರಬೇತುದಾರ ಯುದ್ಧ ವಿಮಾನದ ಹಿಂಭಾಗದಲ್ಲಿದ್ದ ಹನುಮಾನ್ ಚಿತ್ರವನ್ನು ಹೆಚ್ಎಎಲ್ ತೆಗೆದುಹಾಕಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಈ ಫೋಟೋ ವೈರಲ್ ಆಗುತ್ತಿದ್ದು, ಈ ನಡುವೆ ಭಗವಾನ್ ಹನುಮಾನ್ ಚಿತ್ರ ತೆಗೆದುಹಾಕಿರುವುದು ಹಲವು ಪ್ರಶ್ನೆಗೆ ಕಾರಣವಾಗಿದೆ.

ಹಿಂದೂಸ್ತಾನ್ ಲೀಡ್ ಇನ್ ಫೈಟರ್ ಟ್ರೈನರ್ ಅನ್ನು ಸೋಮವಾರ ಹೆಚ್ಎಎಲ್ ಪ್ರದರ್ಶಿಸಿತ್ತು. ತರಬೇತಿ ಯುದ್ಧ ವಿಮಾನದ ಹಿಂಭಾಗದಲ್ಲಿ ಲಂಬವಾದ ರೆಕ್ಕೆ ಮೇಲೆ ಭಗವಾನ್ ಹನುಮಂತನ ಫೋಟೋವನ್ನು ಪ್ರದರ್ಶಿಸಲಾಗಿತ್ತು. ಹೆಚ್ಎಲ್ಎಫ್ಟಿ-42 ವಿಮಾನವು ಮೊದಲ ಸ್ವದೇಶಿ ವಿಮಾನವಾದ ಹೆಚ್ಎಎಲ್ ‘ಮಾರುತ್’ನ ಉತ್ತರಾಧಿಕಾರಿಯಾಗಿದೆ.

ಮಾರುತ್ ಎಂಬುದು ಗಾಳಿಯ ಇನ್ನೊಂದು ಹೆಸರು, ಅಥವಾ ಹಿಂದಿಯಲ್ಲಿ ಇದನ್ನು ‘ಪವನ’ ಎಂದು ಕರೆಯಲಾಗುತ್ತದೆ. ಹಿಂದೂ ಪುರಾಣದಲ್ಲಿ ವಾಯುವಿನ ಪುತ್ರ ಹನುಮಂತ. ಈ ಕಾರಣಕ್ಕೆ ಹನುಮಂತನ ಚಿತ್ರವನ್ನು ಮಾದರಿ ವಿಮಾನದಲ್ಲಿ ಪ್ರದರ್ಶಿಸಲಾಗಿತ್ತು.

ಹೆಚ್ಎಲ್ಎಫ್ಟಿ-42 ಮುಂದಿನ ಪೀಳಿಗೆಯ ಸೂಪರ್ಸಾನಿಕ್ ತರಬೇತುದಾರ ಯುದ್ಧ ವಿಮಾನವಾಗಿದ್ದು. ಆಧುನಿಕ ಯುದ್ಧ ವಿಮಾನ ತರಬೇತಿಯಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸಲಿದೆ. ಈ ವಿಮಾನವು ಅಸ್ತಿತ್ವದಲ್ಲಿರುವ ತರಬೇತುದಾರ ವಿಮಾನಗಳ ನಡುವಿನ ಅಂತರವನ್ನು ಕಡಿಮೆ ಮಾಡುತ್ತದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿಗೆ ಕ್ಯಾರೇ ಎನ್ನದ ಸಿದ್ದು, ಭುಗಿಲೆದ್ದ ಕಾಂಗ್ರೆಸ್ ಅಂತಃಕಲಹ, ಸೆಪ್ಟೆಂಬರ್‌ನಲ್ಲಿ ಮುಹೂರ್ತ ಫಿಕ್ಸ್: ಬಿಜೆಪಿ

ರಾಜ್ಯದ ಸಣ್ಣ ವ್ಯಾಪಾರಸ್ಥರ ಹಿತರಕ್ಷಣೆಗೆ ಬಿಜೆಪಿ ಸಹಾಯವಾಣಿ - ಛಲವಾದಿ ನಾರಾಯಣಸ್ವಾಮಿ

ಡಿಕೆಶಿ ಕುರ್ಚಿ ಕಸಿದುಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೆ ಮನೆಯಲ್ಲಿ ಕೂರಿಸುವ ಎಚ್ಚರಿಕೆ ಕೊಟ್ರಾ ಸಿದ್ದರಾಮಯ್ಯ: ಆರ್ ಅಶೋಕ್‌

ಆರ್‌ಸಿಬಿ ಕಾಲ್ತುಳಿತ ಪ್ರಕರಣ, ಅಮಾಯಕರ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಲ್ಲ: ಆರ್‌ ಅಶೋಕ್‌

ತುರ್ತು ನಿರ್ವಹಣಾ ಕಾಮಗಾರಿ: ಬೆಂಗಳೂರಿನ ಈ ಭಾಗದಲ್ಲಿ ಜು.21, 22ರಂದು ವಿದ್ಯುತ್ ವ್ಯತ್ಯಯ

ಮುಂದಿನ ಸುದ್ದಿ
Show comments