Webdunia - Bharat's app for daily news and videos

Install App

ಅರ್ಧ ವರ್ಷ ಶಾಲೆ ಮುಗೀತಾ ಬಂದ್ರು ಸಿಕ್ಕಿಲ್ಲ ಮಕ್ಕಳಿಗೆ ಪಠ್ಯ ಪುಸ್ತಕ

Webdunia
ಗುರುವಾರ, 15 ಸೆಪ್ಟಂಬರ್ 2022 (20:17 IST)
ಅರ್ಧ ವರ್ಷ ಮುಗೀತಾ ಬಂದ್ರು ಮಕ್ಕಳಿಗೆ ಪಠ್ಯಪುಸ್ತಕ ಮಾತ್ರ ಸಿಗ್ತಿಲ್ಲ.ಪಠ್ಯಪುಸ್ತಕ  ಇಲ್ಲದೆ ವಿದ್ಯಾರ್ಥಿಗಳಿಗೆ ಪಾಠ ಮಾಡಲು ಆಗದ ಸ್ಥಿತಿಗೆ ಶಿಕ್ಷಕರು ತಲುಪಿದ್ದಾರೆ.ಇನ್ನೂ 9  ಹಾಗೂ 10 ನೇ ತರಗತಿ ಇಂಗ್ಲಿಷ್ ಮಾಧ್ಯಮದ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಇಲ್ಲ.ಪರಿಷ್ಕೃತ ಪಠ್ಯ ಪುಸ್ತಕವನ್ನ ಶಿಕ್ಷಣ ಇಲಾಖೆ ಇನ್ನು ಮಕ್ಕಳಿಗೆ ಕಳುಹಿಸಿ ಕೊಟಿಲ್ಲ.ಕಲ್ಯಾಣ ಕರ್ನಾಟಕದ ಇಂಗ್ಲೀಷ್ ಮಾಧ್ಯಮ ಶಾಲೆಗಳಿಗೆ ಪಠ್ಯ ಪುಸ್ತಕ ಕೊಡದ ಶಿಕ್ಷಣ ‌ಇಲಾಖೆಯ ವಿರುದ್ಧ ಖಾಸಗಿ ಶಾಲಾ ಒಕ್ಕೂಟ ಗರಂ ಆಗಿದೆ. ಅಷ್ಟೇ ಅಲ್ಲದೆ 9 ನೇ ತರಗತಿಯ ಮಕ್ಕಳಿಗೆ ಸಮಾಜ ವಿಜ್ಞಾನ ಹಾಗೂ 10 ನೇ ತರಗತಿಯ ಕನ್ನಡ ಪಠ್ಯಪುಸ್ತಕ ಪುಸ್ತಕ ಸಿಕ್ಕಿಲ್ಲ.ಶೈಕ್ಷಣಿಕ ವರ್ಷ ಪ್ರಾರಂಭವಾಗಿ ನಾಲ್ಕು ತಿಂಗಳು ಕಳೆದಿದೆ.ಆದ್ರೆ ಶಿಕ್ಷಣ ಇಲಾಖೆ ಇದುವರೆಗೂ ಪರಿಷ್ಕೃತ ಪಠ್ಯಪುಸ್ತಕ ಶಾಲೆಗಳಿಗೆ ಕೊಟ್ಟಿಲ್ಲವೆಂದು ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. 
 
ಮಕ್ಕಳಿಗೆ ಪಠ್ಯಪುಸ್ತಕ ಕೊಡದೇ ಯಾವುದೇ ಉಪಯೋಗವಾಗ್ತಿಲ್ಲ . ಶಿಕ್ಷಕರು ಮಕ್ಕಳಿಗೆ ಪಾಠ ಮಾಡಲಾಗದೇ ಪರದಾಡ ನಡೆಸುವಂತಾಗಿದೆ ಎಂದು  ಖಾಸಗಿ ಶಾಲೆಗಳ ಒಕ್ಕೂಟದ ರುಪ್ಸಾ ರಾಜ್ಯಧ್ಯಕ್ಷ ಲೋಕೇಶ್ ತಾಳಿಕಟ್ಟೆ ಕಿಡಿಕಾರಿದ್ದಾರೆ.ಶಿಕ್ಷಣ ಇಲಾಖೆ ಪಠ್ಯಪುಸ್ತಕ ಕೊಡದ ಬಗ್ಗೆ ಸಿಎಂಗೆ ಪತ್ರ ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಪತ್ರ ಬರೆದು ಸಾಕಷ್ಟು ಭಾರಿ ಮನವಿ ಮಾಡಿಕೊಂಡ್ರು. ಪಠ್ಯಪುಸ್ತಕ  ಮಾತ್ರ ಕೊಟ್ಟಿಲ್ಲ.ಹೀಗಾಗಿ ಪಠ್ಯಪುಸ್ತಕ ಸಿಗದೆ‌‌ ಬಗ್ಗೆ ಖಾಸಗಿ ಶಾಲೆಗಳಿಂದ ವ್ಯಾಪಕ ಅಸಾಮಾಧಾನ ಕೇಳಿಬರುತ್ತಿದೆ
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಎಂ ಸಿದ್ದರಾಮಯ್ಯಗೆ ಆರ್ ಎಸ್ಎಸ್ ಬಗ್ಗೆ ವಿವರವಾಗಿ ಹೇಳಿದ ಬಿವೈ ವಿಜಯೇಂದ್ರ

ಧರ್ಮಸ್ಥಳ ಚಲೋಗೆ ಚಾಲನೆ ನೀಡಿದ ಬಿಜೆಪಿ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೆಣ್ಣುಮಕ್ಕಳಲ್ಲೂ ಹೃದಯಾಘಾತ ಹೆಚ್ಚಲು ಇದೇ ಕಾರಣ

ಮೋದಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಟೀಕೆ: ನೀವು ಎಮರ್ಜೆನ್ಸಿ ಹೇರಬಹುದಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments