Publish Date: Mon, 14 Jun 2021 (09:04 IST)
Updated Date: Mon, 14 Jun 2021 (09:06 IST)
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಕಡಿಮೆಯಾಗಿರುವ ಹಿನ್ನಲೆಯಲ್ಲಿ ಸರ್ಕಾರ ಇಂದಿನಿಂದ ಹಂತ ಹಂತವಾಗಿ ಅನ್ ಲಾಕ್ ಜಾರಿಗೊಳಿಸಿದೆ.
ಇಂದಿನಿಂದ ಮುಂದಿನ ಸೋಮವಾರದವರೆಗೆ ಕೆಲವು ನಿರ್ಬಂಧಗಳೊಂದಿಗೆ ಹೊಸ ನಿಯಮ ಜಾರಿಗೊಳಿಸಲಾಗಿದೆ. ಆದರೆ ಅನ್ ಲಾಕ್ ಶುರುವಾಗಿದೆಯೆಂದು ಬೇಕಾಬಿಟ್ಟಿ ಓಡಾಡುವಂತಿಲ್ಲ.
ಬಸ್ ಸಂಚಾರ ಇನ್ನೂ ಆರಂಭವಾಗಿಲ್ಲ. ಆದರೆ ಆಟೋ, ಟ್ಯಾಕ್ಸಿ ಇಬ್ಬರು ಪ್ರಯಾಣಿಕರೊಂದಿಗೆ ಸಂಚರಿಸಬಹುದಾಗಿದೆ. ಮಧ್ಯಾಹ್ನ 2 ರವರೆಗೆ ಅಗತ್ಯ ವಸ್ತುಗಳ ಖರೀದಿಗೆ, ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಅನ್ ಲಾಕ್ ಇದೆಯೆಂದು ಅನಗತ್ಯ ಓಡಾಟ ನಡೆಸಿದರೆ ಪೊಲೀಸರ ಲಾಠಿ ರುಚಿ ನೋಡಬೇಕಾದೀತು. ನಿಮ್ಮ ಎಚ್ಚರಿಕೆಯಲ್ಲಿ ನೀವಿದ್ದರೆ ಎಲ್ಲರಿಗೂ ಒಳ್ಳೆಯದು.