Daily Horoscope

ಸರ್ಕಾರಿ ನೌಕರರ ಪರ `ಕೈ' ಬ್ಯಾಟಿಂಗ್​​

Webdunia
ಬುಧವಾರ, 1 ಮಾರ್ಚ್ 2023 (15:05 IST)
ಬಿಜೆಪಿಯವರು ಮಾಡದಿದ್ದರೆ ನಾವು ಅಧಿಕಾರಕ್ಕೆ ಬಂದಾಗ 7ನೇ ವೇತನ ಆಯೋಗದ ವರದಿಯನ್ನು ಜಾರಿಗೆ ತರುತ್ತೇವೆ ಎಂದು ಕಾಂಗ್ರೆಸ್ ಘೋಷಿಸಿದೆ. 7ನೇ ವೇತನ ಆಯೋಗದ ಮಧ್ಯಂತರ ಜಾರಿಗೆ ಆಗ್ರಹಿಸಿ ಇಂದು ಪ್ರತಿಭಟನೆ ನಡೆಸಿದ ಹಿನ್ನೆಲೆ ಸರ್ಕಾರ ಶೇಕಡಾ 17ರಷ್ಟು ವೇತನ ಹೆಚ್ಚಳ ಮಾಡುವುದಾಗಿ ಒಪ್ಪಿಗೆ ನೀಡಿ ಅಧಿಕೃತ ಆದೇಶ ಹೊರಡಿಸಿದೆ. ಈ ಮಧ್ಯೆ ಬೆಳಗಾವಿಯಲ್ಲಿಂದು ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಒಂದು ವೇಳೆ ಬಿಜೆಪಿಯವರು ಮಾಡದೇ ಇದ್ದರೆ, ನಾವು ಅಧಿಕಾರಕ್ಕೆ ಬಂದು 7ನೇ ವೇತನ ಆಯೋಗ ವರದಿ ಜಾರಿ ಮಾಡುತ್ತೇವೆ ಎಂದು ಹೇಳಿದ್ದಾರೆ. ಇನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೂಡ ಹಾಸನದಲ್ಲಿ ಈ ಕುರಿತು ಮಾತನಾಡಿದ್ದಾರೆ. ನಾವು ಸರ್ಕಾರಿ ನೌಕರರ ಪರವಾಗಿ ಇದ್ದೇವೆ. ಕಾಂಗ್ರೆಸ್ ಖಂಡಿತ ಅಧಿಕಾರಕ್ಕೆ ಬರುತ್ತೆ, ಯಾರಿಗೂ ಅನುಮಾನ ಬೇಡ. ನಾವು ಅಧಿಕಾರಕ್ಕೆ ಬಂದ ಕೂಡಲೇ 7ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿ ಮಾಡುತ್ತೇವೆ ಎಂದು ಹೇಳಿದ್ದಾರೆ. ಏಳನೇ ವೇತನ ಆಯೋಗ ಜಾರಿ ಮಾಡಲು ನಮ್ಮ ಪಕ್ಷ ಬದ್ಧವಾಗಿದೆ. ಇದೊಂದು ಭ್ರಷ್ಟ ಸರ್ಕಾರ, ಎಲ್ಲ ಕಡೆಯೂ ಭ್ರಷ್ಟಾಚಾರ ಹೆಚ್ಚಾಗಿದೆ. ಹೋರಾಟ ನಿಮ್ಮ ಹಕ್ಕು, ನೌಕರರು ಕೇಳುತ್ತಿರುವುದು ಸರಿಯಾಗಿದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ನೊಬ್ಬಳೊಂದಿಗೆ ಸಿಕ್ಕಿಬಿದ್ದ ಪ್ರಿಯಕರ: ಚಕಾರ ಎತ್ತಿದ ಪ್ರೇಯಸಿ ಮೇಲೆಯೇ ಕಾರು ಹರಿಸಿ ಪರಾರಿ Video

ಅಬ್ಬಾ ನಿಜಕ್ಕೂ ಭಯಾನಕ… ಎಕ್ಸ್ ಪ್ರೆಸ್ ರೈಲಿಗೆ ಅಡಿಗೆ ಸಿಲುಕಿದವು ಹತ್ತಾರು ಮೇಕೆಗಳು Video

ಒಂದೇ ಕಪ್ಪು ಚುಕ್ಕೆಯಿಲ್ಲದೇ ದೇಶ ಮುನ್ನಡೆಸುತ್ತಿದ್ದಾರೆ ಮೋದಿ ಜೀ: ವಿಜಯೇಂದ್ರ ಹೊಗಳಿಕೆ

ಗಣೇಶ ಪ್ರತಿಷ್ಠಾಪನೆ ಆಗುವ ಮುನ್ನ ಚಪ್ಪಲಿ ಹಾಕಿಕೊಂಡರೆ ತಪ್ಪಿಲ್ಲ: ಯದುವೀರ್ ಒಡೆಯರ್

ಸ್ನಾನಕ್ಕೆ ಹೋಗ್ತೀನಿ ಎಂದಿದ್ದ 23 ವರ್ಷದ ಯುವತಿ ಹಠಾತ್ ಸಾವು: ಹಾಸನದ ಲಾಡ್ಜ್ನಲ್ಲಿ ನಡೆದಿದ್ದೇನು

ಮುಂದಿನ ಸುದ್ದಿ
Show comments