Webdunia - Bharat's app for daily news and videos

Install App

ಆರೋಪಿಯನ್ನು ತೋರಿಸಿ, ನಮ್ಮ ವಶಕ್ಕೆ ನೀಡಿ: ಪೋಷಕರ ಒತ್ತಾಯ

Webdunia
ಬುಧವಾರ, 22 ಅಕ್ಟೋಬರ್ 2014 (14:33 IST)
ಬೆಂಗಳೂರಿನ ಜಾಲಹಳ್ಳಿಯಲ್ಲಿರುವ ಆರ್ಕಿಡ್ಸ್ ಶಾಲೆಯಲ್ಲಿ 4ವರ್ಷದ  ಶಾಲಾ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಷಕರು ಶಾಲೆಯ ಎದುರು ನೆರೆದಿದ್ದು, ತೀವ್ರ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ. ಆರೋಪಿಯನ್ನು ನಮ್ಮ ವಶಕ್ಕೆ ಒಪ್ಪಿಸಿ, ನಾವು ಬುದ್ಧಿ ಕಲಿಸುತ್ತೇವೆ ಎಂದು ಕೆಲವು ಪೋಷಕರು ಒತ್ತಾಯಿಸಿದರು.

ಈ ನಡುವೆ ನಗರ ಪೊಲೀಸ್ ಆಯುಕ್ತ ಎಂ.ಎನ್. ರೆಡ್ಡಿ ಸುದ್ದಿಗೋಷ್ಠಿ ನಡೆಸಿದ್ದು, ಮಲ್ಲೇಶ್ವರಂ ಉಪವಿಭಾಗದ ಎಸಿಪಿ ಸಾರಾ ಫಾತಿಮಾ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತದೆ ಎಂದು ಹೇಳಿಕೆ ನೀಡಿದ್ದಾರೆ. ಸಿಸಿಬಿ ಪೊಲೀಸರಕು ಕೂಡ ತನಿಖೆ ನಡೆಸುತ್ತಿದ್ದಾರೆಂದು ಅವರು ಹೇಳಿದರು. ನಾವು ಎಲ್ಲಾ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಅಪರಾಧಿಯನ್ನು ಪತ್ತೆಮಾಡುತ್ತೇವೆ ಎಂದು ಎಂ.ಎನ್. ರೆಡ್ಡಿ ಭರವಸೆ ನೀಡಿದರು.

ದೂರು ಬಂದ ತಕ್ಷಣ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಸಿಸಿಟಿವಿ ಫೂಟೇಜ್‌ಗಳನ್ನು ವಶಪಡಿಸಿಕೊಂಡು ಪರೀಕ್ಷಿಸಲಾಗುತ್ತಿದೆ ಎಂದು ಹೇಳಿದ್ದಾರೆ. ತನಿಖೆ ಸರಿಯಾದ ಹಾದಿಯಲ್ಲಿ ನಡೆಯುತ್ತಿದ್ದು ಯಾವುದೇ ರೀತಿಯಲ್ಲಿ ಅನುಮಾನ ಬೇಡ, ಸಿಸಿಟಿವಿ ಕ್ಯಾಮೆರಾದ ದೃಶ್ಯವನ್ನು ಸೂಕ್ಷ್ಮವಾಗಿ ಪರಿಶೀಲಿಸಿದ್ದೇವೆ.  ನಿನ್ನೆ ರಾತ್ರಿಯಿಂದಲೇ ಬೋಧಕೇತರ ಸಿಬ್ಬಂದಿಯ ವಿಚಾರಣೆ ನಡೆಸಲಾಗುತ್ತಿದೆ ಎಂದು ರೆಡ್ಡಿ ಹೇಳಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ