Webdunia - Bharat's app for daily news and videos

Install App

ನರ್ಸ್ ಹಾಗೂ ಆಶಾ ಕಾರ್ಯಕರ್ತರ ಕೆಲಸಕ್ಕೆ ಸಂತಸವಿದೆ ಎಂದ ಡಾಕ್ಟರ್ ಕೆ ಸುಧಾಕರ್

Webdunia
ಮಂಗಳವಾರ, 15 ಮಾರ್ಚ್ 2022 (15:50 IST)
ಸಮಾಜ ಅಭಿವೃದ್ಧಿ ಕಾಣಲು ಮಹಿಳೆಯರಿಗೆ ಸಮಾನ ಹಕ್ಕು, ಅವಕಾಶಗಳನ್ನು ನೀಡಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
 
ಎಫ್ ಕೆಸಿಸಿಐ ಸಭಾಂಗಣದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿದ ಸಚಿವರು, ಮಹಿಳೆ ಬಾಲ್ಯದಿಂದಲೇ ಹೋರಾಟವನ್ನು ಆರಂಭಿಸಬೇಕಾಗುತ್ತದೆ.
ಕುಟುಂಬದಲ್ಲೂ ಹಕ್ಕುಗಳಿಗಾಗಿ ಹೋರಾಟ, ಸಮಾಜದಲ್ಲಿ ಲಿಂಗ ಸಮಾನತೆಗಾಗಿ ಹೋರಾಟ, ಹೀಗೆ ಮಹಿಳೆಯ ಹೋರಾಟ ನಿರಂತರವಾಗಿರುತ್ತದೆ. ಆದರೆ ಯಾವುದೇ ಸಮಾಜ ಸಂಪೂರ್ಣ ಅಭಿವೃದ್ಧಿ ಕಾಣಬೇಕೆಂದರೆ ಮಹಿಳೆಯರಿಗೆ ಸಂಪೂರ್ಣ ಅವಕಾಶ, ಹಕ್ಕುಗಳನ್ನು ನೀಡಬೇಕಾಗುತ್ತದೆ ಎಂದರು.
 
ಪ್ರಧಾನಿ ನರೇಂದ್ರ ಮೋದಿಯವರು ಭೇಟಿ ಬಚಾವೋ, ಭೇಟಿ ಪಡಾವೋ ಕಾರ್ಯಕ್ರಮ ಆರಂಭಿಸಿದರು. ಇದರ ಜೊತೆಗೆ ಭೇಟಾ ಸಮ್ಜಾವೋ ಎಂಬುದನ್ನೂ ಸೇರಿಸಲಾಯಿತು. ಇದು ಲಿಂಗ ಅಸಮಾನತೆ ನಿವಾರಿಸಲು ನೆರವಾಗಿದೆ. 2015-16 ರಲ್ಲಿ ಮಹಿಳೆಯರ ಸಂಖ್ಯೆ (1,000 ಪುರುಷರಿಗೆ) 840 ಇತ್ತು. 2020 ರಲ್ಲಿ ಈ ಸಂಖ್ಯೆ 1,040-1,050 ಆಗಿದೆ. ಅಂದರೆ ಈ ಐದು ವರ್ಷಗಳಲ್ಲಿ ಹೆಣ್ಣುಮಕ್ಕಳ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದೆ. ಇದು ದೇಶ ಸರಿಯಾದ ದಿಕ್ಕಿನಲ್ಲಿ ಚಲಿಸುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಈಗ ರಾಜ್ಯದಲ್ಲಿ ಮಹಿಳಾ ಉದ್ಯಮಿಗಳ ಸಂಖ್ಯೆ ಹೆಚ್ಚಿದೆ. ಮಹಿಳಾ ನವೋದ್ಯಮಗಳು ಕಂಡುಬರುತ್ತಿದ್ದರೂ, ಅತಿ ಕಡಿಮೆ ಪ್ರಮಾಣದಲ್ಲಿವೆ. ಇದರಲ್ಲಿ ಇನ್ನಷ್ಟು ಪ್ರಗತಿ ಸಾಧಿಸಬೇಕಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru stampede: ನಂಗೆ ಮಗ ಬೇಕು.. ಮಗನ ಸಮಾಧಿ ಮೇಲೆ ಬಿದ್ದು ಗೋಳಾಡಿದ ಭೂಮಿಕ್ ತಂದೆ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

Namma Metro: ತಾಯಂದಿರೇ ಗಮನಿಸಿ, ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇನ್ನು ಈ ಸೌಲಭ್ಯವಿರಲಿದೆ

Karnataka Rains: ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ, ಮುಂಗಾರು ಅಬ್ಬರ ಶುರು

Chinnaswamy stampede: ಸಿಎಂ ಕಚೇರಿಯಿಂದಲೇ ಪೊಲೀಸರಿಗೆ ಒತ್ತಡ ಬಂದಿತ್ತು, ಶಾಕಿಂಗ್ ಸತ್ಯ ರಿವೀಲ್

ಮುಂದಿನ ಸುದ್ದಿ