ರಾಜ್ಯದ ಜನತೆಗೆ ಸಂತಸ ಸುದ್ದಿ

Webdunia
ಗುರುವಾರ, 10 ಮಾರ್ಚ್ 2022 (20:18 IST)
ಮಾ.12ರಿಂದ ನಿಮ್ಮ ಮನೆ ಬಾಗಿಲಿಗೆ ಪಹಣಿ, ಜಾತಿ-ಆದಾಯ ಪ್ರಮಾಣಪತ್ರ ಬರಲಿದೆ ಅಂತ ಕಂದಾಯ ಸಚಿವ ಅಶೋಕ್​ ಅವರು ಹೇಳಿದ್ದಾರೆ. ಅವರು ಇಂದು ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ಗೋವಿಂದರಾಜು ಪ್ರಶ್ನೆಗೆ ಉತ್ತರಿಸಿ ಈ ಬಗ್ಗೆ ಮಾಹಿತಿ ನೀಡಿದರು.
ಇದೇ ವೇಳೆ ಮಾತನಾಡುತ್ತ, ಮಾರ್ಚ್ 12ರಂದು ಈ ಯೋಜನೆಗೆ ಚಾಲನೆ ನೀಡಲಿದ್ದು, ಅಂದು 45 ಲಕ್ಷ ರೈತರ ಮನೆ ಬಾಗಿಲಿಗೆ ದಾಖಲೆಗಳನ್ನು ತಲುಪಿಸಲಾಗುತ್ತದೆ ಅಂತ ಮಾಹಿತಿ ನೀಡಿದರು. ಇನ್ನೂ ಇದೇ ವೇಳೆ ಅವರು ತಮ್ಮ ಮಾತನ್ನು ಮುಂದುವರೆಸಿ, ರಾಜ್ಯಾದ್ಯಂತ 700ಕ್ಕೂ ಹೆಚ್ಚು ಜನಸೇವಾ ಕೇಂದ್ರಗಳಿಂದ ರೈತರಿಗೆ ವಿವಿಧ ಸೇವೆ ಕೊಡಲಾಗುತ್ತಿದೆ. ಪಹಣಿ, ಮ್ಯುಟೇಷನ್ ಇತ್ಯಾದಿ ನೀಡಲಾಗುತ್ತಿದೆ. ಇದಕ್ಕೆ ಕನಿಷ್ಠ ದರವಾಗಿ 15 ರೂ. ಶುಲ್ಕ ಪಡೆಯಲಾಗುತ್ತಿದೆ. ಡೇಟಾ ವೆಚ್ಚ, ಪರಿಕರ ವೆಚ್ಚಗಳನ್ನು ನಿಭಾಯಿಸಲ ಈ ಹಣ ಪಡೆಯಲಾಗುತ್ತಿದೆ. ಆನ್ ಲೈನ್​ನಲ್ಲೇ ನೋಡಲು ಶುಲ್ಕವಿಲ್ಲ. ಆದರೆ, ಪಹಣಿ, ಮ್ಯುಟೇಷನ್ ಇತ್ಯಾದಿ ಪ್ರಿಂಟ್ ಪ್ರತಿ ಪಡೆಯಲು ಶುಲ್ಕ ಪಡೆಯಲಾಗುತ್ತದೆ ಅಂತ ತಿಳಿಸಿದರು. ಮಾರ್ಚ್ 12ರಂದು ರೈತರ ಪಹಣಿ, ಜಾತಿ ಪ್ರಮಾಣಪತ್ರ, ಆದಾಯ ಪ್ರಮಾಣಪತ್ರವನ್ನು ಕವರ್​​ನಲ್ಲಿ ಹಾಕಿ 45 ಲಕ್ಷ ರೈತರ ಮನೆ ಬಾಗಿಲಿಗೆ ನಾವೇ ತಲುಪಿಸಲಿದ್ದೇವೆ. ಇದನ್ನೆಲ್ಲಾ ಉಚಿತವಾಗಿ ಕೊಡಲಿದ್ದೇವೆ. ಐದು ವರ್ಷಕ್ಕೊಮ್ಮೆ ರೈತರಿಗೆ ಇವೆಲ್ಲಾ ದಾಖಲೆ ಉಚಿತವಾಗಿ ಕೊಡಬೇಕು ಎಂದು ಕಾನೂನಿನಲ್ಲೇ ಇದೇ ಅಂತ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments