Select Your Language

Notifications

webdunia
webdunia
webdunia
webdunia

ದೊಡ್ಡಗೌಡ್ರು ಬಿಜೆಪಿ ಜೊತೆ ಮೈತ್ರಿಗೆ ಒಪ್ಪಿರೋದು ಸಂತೋಷ : ಯಡಿಯೂರಪ್ಪ

ದೊಡ್ಡಗೌಡ್ರು ಬಿಜೆಪಿ ಜೊತೆ ಮೈತ್ರಿಗೆ ಒಪ್ಪಿರೋದು ಸಂತೋಷ : ಯಡಿಯೂರಪ್ಪ
ಬೆಂಗಳೂರು , ಶುಕ್ರವಾರ, 8 ಸೆಪ್ಟಂಬರ್ 2023 (14:25 IST)
ಬೆಂಗಳೂರು : ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ನರೇಂದ್ರ ಮೋದಿ ಅವರನ್ನ ಭೇಟಿಯಾಗಿ ಲೋಕಸಭೆಯಲ್ಲಿ ಹೊಂದಾಣಿಕೆಗೆ ತೀರ್ಮಾನ ಮಾಡಿದ್ದಾರೆ. ಇದನ್ನ ಸ್ವಾಗತ ಮಾಡ್ತೇನೆ.
 
ಆದಷ್ಟು ಬೇಗ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರನ್ನ ಭೇಟಿ ಮಾಡ್ತೇನೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. 2024ರ ಲೋಕಸಭಾ ಚುನಾವಣೆಗೆ ಬಿಜೆಪಿ-ಕಾಂಗ್ರೆಸ್ ಮೈತ್ರಿ ವಿಚಾರವಾಗಿ `ಪಬ್ಲಿಕ್ ಟಿವಿ’ಯೊಂದಿಗೆ ಮಾತನಾಡಿದ ಅವರು, ಮೈತ್ರಿಗೆ ಸ್ವಾಗತ ಮಾಡ್ತಿನಿ.

ಜೆಡಿಎಸ್ 5 ಕ್ಷೇತ್ರಗಳಿಗೆ ಬೇಡಿಕೆಯಿಟ್ಟಿದೆ. ಆದ್ರೆ ಅಮಿತ್ ಶಾ ನಾಲ್ಕು ಕ್ಷೇತ್ರಗಳನ್ನ ಬಿಟ್ಟುಕೊಡಲು ಒಪ್ಪಿಕೊಂಡಿದ್ದಾರೆ. ಯಾವ ಕ್ಷೇತ್ರಗಳನ್ನ ಬಿಟ್ಟುಕೊಡಬೇಕು ಎನ್ನುವ ಬಗ್ಗೆ ಅಮಿತ್ ಶಾ ನಿರ್ಧಾರ ಮಾಡ್ತಾರೆ. ಎಲ್ಲವೂ ಅವರಿಗೇ ಗೊತ್ತು ಎಂದು ಹೇಳಿದ್ದಾರೆ.

ಈ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಆರಂಭವಾಗಿದೆ. ನಾನೂ ಕೂಡ ಸೆಪ್ಟೆಂಬರ್ 16ರಿಂದ ರಾಜ್ಯ ಪ್ರವಾಸ ಮಾಡುತ್ತೇನೆ.

Share this Story:

Follow Webdunia kannada

ಮುಂದಿನ ಸುದ್ದಿ

ತನ್ನ ಸ್ವಾರ್ಥಕ್ಕೆ 14 ತಿಂಗಳ ಮಗುವನ್ನೇ ಕೊಂದ ತಂದೆ!?