Publish Date: Tue, 14 Dec 2021 (14:28 IST)
Updated Date: Tue, 14 Dec 2021 (14:31 IST)
ಪರಿಷತ್ ಚುನಾವಣೆಯ ಫಲಿತಾಂಶ ಸಮಾಧಾನ ತಂದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಳಿತಾರೂಢ ಪಕ್ಷಕ್ಕೆ ಒಂದು ಲಾಭ ಇದ್ದೇಯಿದೆ.ಅದನ್ನು ಅವರು ದುರ್ಬಳಕೆ ಮಾಡಿಕೊಂಡಿದ್ದಾರೆ.
ಕಳೆದ ಬಾರಿ ಸೋತ ಕಡೆ ಈ ಬಾರಿ ನಾವು ಗೆದ್ದಿದ್ದೇವೆ.ಇನ್ನೂ ಕೆಲವು ಕಡೆ ಸೀಟು ಕಳೆದುಕೊಂಡಿದ್ದೇವೆ ಎಂದು ಹೇಳಿದರು. ಪರಿಷತ್ ನಲ್ಲಿ ಬಹುಮತಕ್ಕಾಗಿ ನಾವು ಹೋರಾಟ ಮಾಡಿಲ್ಲ. ಅದನೆಲ್ಲಾ ನಾವು ಲೆಕ್ಕ ಹಾಕಿಲ್ಲ. ಉತ್ತಮ ಫಲಿತಾಂಶ ನಿರೀಕ್ಷೆ ಮಾಡಿದ್ದೇವೆ. ಒಟ್ಟಾರೇ ಫಲಿತಾಂಶ ಸಮಾಧಾನ ತಂದಿದೆ ಎಂದು ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ.